ಸ್ವಯಂ ಪ್ರೇರಿತ ಅಂಗಡಿ ಮುಂಗಟ್ಟು ಬಂದ್; ಅನ್ನದಾತರ ಹೋರಾಟಕ್ಕೆ ಬೆಂಬಲ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ವಿವಿಧ ರೈತ ಸಂಘ, ದಲಿತ ಸಂಘ ಹಾಗೂ ದಲಿತ ಪರ ಸಂಘಟನೆಗಳು ನಗರದಲ್ಲಿ ನಡೆಸುತ್ತಿರುವ ಹೋರಾಟಕ್ಕೆ ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡುವ ಮೂಲಕ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ನಗರದ ಗಾಂಧಿ ವೃತ್ತದಿಂದ ಟಾಂಗಾ ಕೂಟ ಮೂಲಕ ತೆರಳುತ್ತಿರುವ ಪ್ರತಿಭಟನಾ ರ್ಯಾಲಿ ಬರುತ್ತಿದ್ದಂತೆ ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ಬಂದ ಮಾಡುವ ಮೂಲಕ ಬೆಂಬಲಿಸಿದ್ದಾರೆ.

ಅಗತ್ಯ ಸೇವೆಗಳ ಅಂಗಡಿ ಮುಂಗಟ್ಟುಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ರೀತಿಯ ಅಂಗಡಿಗಳ ಮಾಲೀಕರು ಅಂಗಡಿಗಳ ಬಾಗಿಲು ಹಾಕಿ ಕೇಂದ್ರ ಸರ್ಕಾರದ ಕೃಷಿ ವಿರೋಧಿ ಕಾಯ್ದೆ ವಿರೋಧಿಸಿ ಅನ್ನದಾತರು ಆಚರಿಸುತ್ತಿರುವ ಭಾರತ್ ಬಂದ್ ಗೆ ಬೆಂಬಲ ನೀಡಿದರು.


Spread the love

LEAVE A REPLY

Please enter your comment!
Please enter your name here