ಹರಿಹರದಲ್ಲಿ ಕುಸ್ತಿ ಹಣಾಹಣಿ; ಗದಗ ಕುಸ್ತಿ ಕ್ಷೇತ್ರಕ್ಕೆ ಮತ್ತೊಂದು ಗರಿಮೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

ಕೋವಿಡ್-19 ಸಾಂಕ್ರಾಮಿಕ ಸೋಂಕಿನ ಹಾವಳಿಯಿಂದಾಗಿ ಸ್ತಬ್ಧವಾಗಿದ್ದ ಕ್ರೀಡಾ ಚಟುವಟಿಕೆಗಳು ಎಂಟು ತಿಂಗಳ ಬಳಿಕ ಚುರುಕುಗೊಂಡಿದ್ದು, ಇದರಿಂದ ಮತ್ತೆ ಕುಸ್ತಿಯ ಸದ್ದು ಕೇಳ ತೊಡಗಿದಂತಾಗಿದೆ.

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಕರ್ನಾಟಕ ರಾಜ್ಯ ಕುಸ್ತಿ ಅಸೋಶಿಯೆಶನ್ ಹಾಗೂ ನಾಡಮಂದ್ ಸಾವಲಿ ಗರಡಿ ಮನೆ ಸಹಯೋಗದಲ್ಲಿ ಸೋಮವಾರ ನಡೆದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಗಳಲ್ಲಿ ಗದಗನ ಅಂತರಾಷ್ಟ್ರೀಯ ಕುಸ್ತಿಪಟು ಕುಮಾರಿ ಪ್ರೇಮಾ ಹುಚ್ಚಣ್ಣವರ ಬಂಗಾರದ ಪದಕ ಪಡೆದಿದ್ದಾರೆ.

ಕರ್ನಾಟಕ ಕಂಠೀರವ, ಕರ್ನಾಕ ಕೇಸರಿ, ಕರ್ನಾಟಕ ಕುಮಾರ, ಕರ್ನಾಟಕ ಕಿಶೋರ, ಒನಕೆ ಓಬವ್ವ, ವೀರರಾಣಿ ಕಿತ್ತೂರ ಚೆನ್ನಮ್ಮ ವಿಭಾಗದ ಹಿರಿಯರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿರುವ ಕುಮಾರಿ ಪ್ರೇಮಾ ಹುಚ್ಚಣ್ಣವರ ಬಂಗಾರದ ಪದಕದೊಂದಿಗೆ ಕಿತ್ತೂರ ರಾಣಿ ಚೆನ್ನಮ್ಮ ಪ್ರಶಸ್ತಿ ಪಡೆಯುವ ಮೂಲಕ ಗದಗ ಕುಸ್ತಿ ಕ್ಷೇತ್ರಕ್ಕೆ ಮತ್ತೊಂದು ಗರಿಮೆ ಸಿಕ್ಕಂತಾಗಿದೆ. ಕುಸ್ತಿ ತರಬೇತುದಾರ ಶರಣಗೌಡ ಬೇಲೇರಿ ಇದ್ದರು.


Spread the love

LEAVE A REPLY

Please enter your comment!
Please enter your name here