HomeCrime Newsಹಳೆ ವೈಷಮ್ಯದ ಹಿನ್ನೆಲೆ, ಸಹೋದರರಿಬ್ಬರ ಬರ್ಬರ ಹತ್ಯೆ

ಹಳೆ ವೈಷಮ್ಯದ ಹಿನ್ನೆಲೆ, ಸಹೋದರರಿಬ್ಬರ ಬರ್ಬರ ಹತ್ಯೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಕಲಬುರಗಿ: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಸಹೋದರರಿಬ್ಬರನ್ನು ಮಾರಾಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕಮಲಾಪುರ ತಾಲೂಕಿನ ತಡಕಲ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ನೀಲೇಶ್ 40, ರಾಜಶೇಖರ 35 ಎಂದು ಗುರುತಿಸಲಾಗಿದೆ. ಈ ಹಿಂದೆ ಕುಡಿದ ಮತ್ತನಲ್ಲಿ ಬೇರೆಯವರೊಂದಿಗೆ ಕ್ಷುಲಕ ಕಾರಣಕ್ಕೆ ಸಹೋದರರಿಬ್ಬರೂ ಜಗಳವಾಡಿದ್ದರು ಎಂದು ತಿಳಿದುಬಂದಿದೆ. ಇದೇ ಈ ಕೊಲೆಗೆ ಕಾರಣವಾಗಿರಬಹುದು ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಹೋದರರ ಮೃತದೇಹದ ಮುಂದೆ ಸಂಬಂಧಿಕರ ರೋಧನ ಮನ ಕಲುಕುವಂತಿತ್ತು. ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದು, ಮಹಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img