ಹಿನ್ನೀರಿನಲ್ಲಿ ಕೊಚ್ಟಿ ಹೋಗುತ್ತಿದ್ದ 15 ದಿನದ ಹಸುಗೂಸು ರಕ್ಷಣೆ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಯಾದಗಿರಿ: ಭೀಮಾ ನದಿಯ ಹಿನ್ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ 15 ದಿನಗಳ ಹಸುಗೂಸನ್ನು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಶಹಾಪುರ ತಾಲೂಕಿನ ರೋಜಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕುಟುಂಬಸ್ಥರನ್ನು ಸ್ಥಳಾಂತರಿಸುವಾಗ ತೆಪ್ಪ ಅಲುಗಾಡಿ ಕೂಸು ನದಿಗೆ ಬಿದ್ದಿತ್ತು.

ಗ್ರಾಮದ ತವಕಲ್ ಹಾಗೂ ರಜಿಯಾ ದಂಪತಿಯ ಗಂಡು ಮಗು ಇದಾಗಿದ್ದು, ಹಿನ್ನೀರಿನಿಂದಾಗಿ ಗ್ರಾಮ ಜಲಾವೃತವಾದ್ದರಿಂದ ಮಗು ಸಮೇತ ದಂಪತಿಯನ್ನು ತೆಪ್ಪದಲ್ಲಿ ಸ್ಥಳಾಂತರ ಮಾಡಲಾಗುತ್ತಿತ್ತು.

ಈ ವೇಳೆ ಅವಘಡ ನಡೆದಿದ್ದು, ಸ್ಥಳೀಯರು ಹಾಗೂ ಮೀನುಗಾರರು ಸೇರಿ ಮಗುವನ್ನು ರಕ್ಷಣೆ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here