ಹುಲಕೋಟಿಯಲ್ಲಿ ಅಬಕಾರಿ ಪೊಲೀಸರ ದಾಳಿ: ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆ ಪರಾರಿ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಕಳೆದ ಹಲವು ದಿನಗಳಿಂದ ಹುಲಕೋಟಿ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮನೆಯೊಂದರ ಮೇಲೆ ದಾಳಿ ಮಾಡಿರುವ ಅಬಕಾರಿ ಪೊಲೀಸರು, 80 ಸಾವಿರ ರೂ, ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದು, ಮಹಿಳೆ ಪರಾರಿಯಾಗಿದ್ದಾರೆ.

ಪರಾರಿಯಾಗಿರುವ ಮಹಿಳೆಯನ್ನು ದೇವಕ್ಕ ನಾರಾಯಣ ಬೆಳ್ಳಿಕೊಪ್ಪ ಎಂದು ಗುರುತಿಸಲಾಗಿದ್ದು, 80 ಸಾವಿರ ರೂ, ಮೌಲ್ಯದ ನಾಲ್ಕು ಕೆ.ಜಿ ಒಣ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಅಬಕಾರಿ ನಿರೀಕ್ಷಕ ಮಲ್ಲಿಕಾರ್ಜುನ ರೆಡ್ಡಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ಸಿಬ್ಬಂದಿಗಳಾದ ಗುರುರಾಜ್ ವಸ್ತ್ರದ, ಚಂದ್ರು ರಾಠೋಡ್, ನಜೀರ ಖುದಾವಂದ, ಸುರೇಶ್ ಮಳೇಕರ್, ಸವಿತಾ ಕೋಳಿವಾಡ ಪಾಲ್ಗೊಂಡಿದ್ದರು.


Spread the love

LEAVE A REPLY

Please enter your comment!
Please enter your name here