ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಹೆಣ್ಣು ಮಕ್ಕಳ ಸಂಖ್ಯೆ ದಿನದಿನಕ್ಕೆ ಇಳಿಮುಖವಾಗತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲರಲ್ಲೂ ಹೆಣ್ಣು ಮಗುವಿನ ಕುರಿತು ಜಾಗೃತಿ ಮೂಡಿಸುವುದು ಮುಖ್ಯವಾಗಿದೆ. ಲಿಂಗ ಸಮಾನತೆ, ಭ್ರೂಣಹತ್ಯ, ಬಾಲ್ಯವಿವಾಹ ಸಮಸ್ಯೆಗಳನ್ನು ಪರಿಹರಿಸಲು ಜಾಗೃತಿ ಮೂಡಿಸಬೇಕಿದೆ ಎಂದು ಆರ್.ಪಿ.ಡಿ. ಟಾಸ್ಕ್ ಫೋರ್ಸ್ ರಾಜ್ಯಾಧ್ಯಕ್ಷ ಮಂಜುನಾಥ ಎಂ. ಹೊಸಕೇರಾ ಹೇಳಿದರು.
ಕರ್ನಾಟಕ ರಾಜ್ಯ ವಿಕಲಚೇತನರ ಆರ್.ಪಿ.ಡಿ. ಟಾಸ್ಕ್ ಫೋರ್ಸ್ ಜಿಲ್ಲಾ ಘಟಕ ಕೊಪ್ಪಳ, ಶ್ರೀ ಕಾರ್ಗಿಲ್ ಮಲ್ಲಯ್ಯ ವಿಕಲಚೇತನರ ಸಂಘ ಅಳವಂಡಿ, ಕರ್ನಾಟಕ ಆರೋಗ್ಯ ಸಂವರ್ಧನಾ ಪ್ರತಿದಿನ ಕೊಪ್ಪಳ, ಸ್ಫೂರ್ತಿ ಹದಿಹರಿಯರ ಮಾದರಿ ಹೆಣ್ಣು ಮಕ್ಕಳ ಯೋಜನೆ ಅಡಿಯಲ್ಲಿ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಅಂಗವಾಗಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪಾಸಾದ ಹೆಣ್ಣು ಮಕ್ಕಳಿಗೆ ಪ್ರಶಂಸನಾ ಪ್ರಮಾಣ ಪತ್ರಗಳನ್ನು ಅಳವಂಡಿ ಶ್ರೀ ಸಿದ್ದೇಶ್ವರ ಸಮುದಾಯ ಭವನದಲ್ಲಿ ವಿತರಿಸಿ ಅವರು ಮಾತನಾಡಿದರು.
ಸಾನ್ನಿಧ್ಯ ವಹಿಸಿದ್ದ ಶ್ರೀ ಮರುಳಾದ್ಯ ಶಿವಾಚಾರ್ಯ ಸ್ವಾಮೀಜಿ, ಹೆಣ್ಣು ಮಕ್ಕಳು ಚಿಕ್ಕಂದಿನಲ್ಲಿ ತಂದೆ ತಾಯಿ, ಮದುವೆ ಬಳಿಕ ಗಂಡನ, ಮುಪ್ಪಿನ ಕಾಲದಲ್ಲಿ ಮಕ್ಕಳ ಆಶ್ರಯದಲ್ಲಿ ಬದುಕುವುದು ಸಾಮಾಜಿಕ ಧರ್ಮ. ಬಾಲ್ಯವಿವಾಹ ನಿಷೇಧ ಕಾಯ್ದೆ ಜಾರಿ ಬಗ್ಗೆ ಜನಜಾಗೃತಿ ಅಭಿಯಾನ ಆಗಬೇಕಿದೆ ಎಂದು ಆಶೀರ್ವದಿಸಿದರು.
ಗ್ರಾ.ಪಂ. ಕಾರ್ಯದರ್ಶಿ ಬಸವರಾಜ, ಜಿಲ್ಲಾ ಯುವ ಪ್ರಶಸ್ತಿ ವಿಜೇತ ವೀರೇಶ ಹಾಲಗುಂಡಿ, ಶ್ರೀ ಕಾರ್ಗಿಲ್ ಮಲ್ಲಯ್ಯ ವಿಕಲಚೇತನರ ಸಂಘದ ಅಧ್ಯಕ್ಷ ಸಿದ್ದಲಿಂಗಯ್ಯ ಅಳವಂಡಿ, ಯೋಗೇಶ್ವರ್ ವಾಲಿಕಾರ, ತಾಜುದ್ದೀನ್, ಅಂಗನವಾಡಿ ಕಾರ್ಯಕರ್ತೆಯರಾದ ಪುಷ್ಪಾವತಿ ಮುನಿಯಮ್ಮನವರ, ಲಲಿತಾ ಆರೇರ, ಅನ್ನಪೂರ್ಣಾ, ಮರಿಬಸಮ್ಮ, ಲಲಿತಾ, ಹನುಮವ್ವ, ಕರ್ನಾಟಕ ಆರೋಗ್ಯ ಸಂವರ್ಧನಾ ಪ್ರತಿಷ್ಠಾನದ ಸಿಬ್ಬಂದಿ ಮಲ್ಲಪ್ಪ, ಲತಾ ಉಪಸ್ಥಿತರಿದ್ದರು.