ಹೈಟೆಕ್ ವೇಶ್ಯಾವಾಟಿಕೆ ದಂಧೆ; ಮೂವರ ಬಂಧನ.!

0
Spread the love

ವಿಜಯಸಾಕ್ಷಿ ಸುದ್ದಿ, ಗಂಗಾವತಿ

ಹೊಸಳ್ಳಿ ರಸ್ತೆಯ ಲಕ್ಷ್ಮಿ ವೆಂಕಟೇಶ್ವರ ಕಾಲೋನಿಯಲ್ಲಿ ಹೈಟೆಕ್ ವೈಶ್ಯವಾಟಿಕೆ ದಂಧೆ ನಡೆಸಲಾಗುತ್ತಿದೆ ಎಂದು ಖಚಿತ ದೂರು ಬಂದ ಹಿನ್ನೆಲೆಯಲ್ಲಿ ನಗರ ಪೋಲಿಸರು ದಾಳಿ ಮಾಡಿ ಇಬ್ಬರು ಮಹಿಳೆಯರು ಸೇರಿ ಐವರನ್ನು ವಶಕ್ಕೆ ಪಡೆದುಕೊಂಡ ಘಟನೆ ಶುಕ್ರವಾರ‌ ನಡೆದಿದೆ.

DYSP ರುದ್ರೇಶ ಉಜ್ಜನಕೊಪ್ಪ ರವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಗರ ಪೋಲಿಸ್ ಠಾಣೆಯ PI ವೆಂಕಟಸ್ವಾಮಿ, ನಗರದ ಹೊಸಳ್ಳಿ ರಸ್ತೆಯಲ್ಲಿ ಬರುವ ಲಕ್ಷ್ಮೀ ವೆಂಕಟೇಶ್ವರ ಕಾಲೋನಿಯ ಸಿದ್ದಲಿಂಗಯ್ಯ ಸಿದ್ದಪ್ಪ ಎನ್ನುವವರ ಮನೆಯನ್ನು ವಿಜಯಪುರ ಜಿಲ್ಲೆಯ ಬಸವರಾಜ ವಕ್ಕಲಿಗ ಎಂಬ ವ್ಯಕ್ತಿ ಕಳೆದ ಫೆ.20ರಂದು ಮನೆ ಬಾಡಿಗೆಗೆ ತೆಗೆದುಕೊಂಡು ವೈಶ್ಯವಾಟಿಕೆ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ.

ಮೂವರು ಅಂದರ್

ಮೂಲತಃ ವಿಜಯಪುರ ಜಿಲ್ಲೆಯವನಾದ ಬಸವರಾಜ ವಕ್ಕಲಿಗ, ಮಹಾರಾಷ್ಟ್ರದ ಪುಣೆ ಹಾಗು ವಿಜಯಪುರದ ಕಡೆಯಿಂದ ಮಹಿಳೆಯರನ್ನು ಕರೆ ತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಎಂದು ತಿಳಿದು ಬಂದಿದ್ದು, ಸಧ್ಯಕ್ಕೆ ಮಹಾರಾಷ್ಟ್ರ ಮೂಲದ ಒಬ್ಬ ಸಂತ್ರಸ್ತೆ ಮತ್ತು ವಿಜಯಪುರ ಜಿಲ್ಲೆಯ ಒಬ್ಬ ಸಂತ್ರಸ್ತೆ ಸೇರಿ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿ ಸಾಂತ್ವನ ಕೇಂದ್ರಕ್ಕೆ ಒಪ್ಪಿಸಲಾಗಿದೆ.

ಬಸವರಾಜ ವಿಜಯಪುರ,
ಸುರೇಶ್ ಸಿಂಧನೂರು ಹಾಗೂ ಬಸವರಾಜ ತೋಟದ ಮಸ್ಕಿ ಎಂಬುವವರನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.


Spread the love

LEAVE A REPLY

Please enter your comment!
Please enter your name here