HomeGadag Newsಅಂಗನವಾಡಿ ಪುನರಾರಂಭ: ಮಕ್ಕಳಿಗೆ ಹೂವು ನೀಡಿ ಸ್ವಾಗತ

ಅಂಗನವಾಡಿ ಪುನರಾರಂಭ: ಮಕ್ಕಳಿಗೆ ಹೂವು ನೀಡಿ ಸ್ವಾಗತ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ನರಗುಂದ:

ರಾಜ್ಯಾದ್ಯಂತ ಸೋಮವಾರ ಅಂಗನವಾಡಿ ಕೇಂದ್ರಗಳು ಆರಂಭವಾದ ಹಿನ್ನೆಲೆಯಲ್ಲಿ ತಾಲ್ಲೂಕಿನ ಚಿಕ್ಕನರಗುಂದ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಮುತ್ತು ರಾಯರಡ್ಡಿ ದೀಪ ಬೆಳಗಿಸುವ ಮೂಲಕ ಪುನರ್ ಆರಂಭಿಸಿದರು.

ಬಳಿಕ ಮಾತನಾಡಿದ ಅವರು, ಅಂಗನವಾಡಿ ಕೇಂದ್ರಕ್ಕೆ ಬರುವ ಮಕ್ಕಳಿಗೆ ಕೆಮ್ಮು, ನೆಗಡಿ, ಜ್ವರ, ಉಸಿರಾಟದ ಸಮಸ್ಯೆ ಕಂಡುಬಂದರೆ ಅಂತಹ ಮಗುವನ್ನು ಅಂಗನವಾಡಿ ಕೇಂದ್ರಕ್ಕೆ ಕರೆ ತರದಂತೆ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಪೋಷಕರಿಗೆ ಸೂಚಿಸಬೇಕು.

ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ ಪ್ರತಿ ಶನಿವಾರ ಗ್ರಾಪಂ ಸಿಬ್ಬಂದಿಗಳಿಂದ ಸ್ಯಾನಿಟೈಸ್ ಸಿಂಪಡಿಸಲಾಗುವುದು ಎಂದರು.

ಗ್ರಾಮದಲ್ಲಿ ಒಟ್ಟು ಆರು ಅಂಗನವಾಡಿ ಕೇಂದ್ರಗಳಿದ್ದು, ಮಧುವನಗಿತ್ತಿಯಂತೆ ಶೃಂಗಾರಗೊಂಡಿದ್ದವು. ಮಕ್ಕಳಿಗೆ ಹೂವು ಕೊಡುವ ಮೂಲಕ ಬರಮಾಡಿಕೊಂಡರು.

ಈ ಸಂಧರ್ಭದಲ್ಲಿ ಗ್ರಾಪಂ ಸದಸ್ಯರಾದ ಲಕ್ಷ್ಮಣ ಕಂಬಳಿ, ಬಾಪುಗೌಡ ಹಿರೇಗೌಡ್ರ, ಶರಣಪ್ಪ ಹಳೇಮನಿ, ಈರಮ್ಮ ಮುದಿಗೌಡ್ರ, ಶೃತಿ ಬ್ಯಾಳಿ,

ಬಾಲವಿಕಾಸ ಸಮಿತಿ ಸದಸ್ಯರಾದ ವೀಣಾ ರಾಯರಡ್ಡಿ, ನಿಂಗವ್ವ ಮರಿಯಣ್ಣವರ, ಶ್ವೇತಾ ವಾಸನ, ಸುಧಾ ಗಾಣಿಗೇರ, ಗ್ರಾಮಸ್ಥರಾದ ಅಡಿವೆಪ್ಪ ಮರಿಯಣ್ಣವರ, ಬಸನಗೌಡ ಮುದಿಗೌಡ್ರ, ಅಂಗನವಾಡಿ ಕಾರ್ಯಕರ್ತೆಯರಾದ ಗೀತಾ ಕಾಡದೇವರಮಠ, ಸವಿತಾ ರಾಯರಡ್ಡಿ, ಭಾರತಿ ಪಾಟೀಲ್, ಮಂಜುಳಾ ಮೇಟಿ, ನೀಲಗಂಗಾ ಮಾದರ ಇದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!