ವಿಜಯಸಾಕ್ಷಿ ಸುದ್ದಿ, ಮಂಡ್ಯ
Advertisement
ಕೌಟುಂಬಿಕ ಕಲಹಕ್ಕೆ ಬೇಸತ್ತ ಮಹಿಳೆಯೊಬ್ಬರು ತಮ್ಮ ಅತ್ತಿಗೆಯನ್ನು ಕೊಲೆ ಮಾಡಿ ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ನಾಗಮಂಗಲದ ಕಂಬದಹಳ್ಳಿಯಲ್ಲಿ ನಡೆದಿದೆ.
ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. ಪ್ರಿಯಾಂಕ (32) ನಾದಿನಿಯಿಂದ ಕೊಲೆಯಾದ ಅತ್ತಿಗೆಯಾಗಿದ್ದು, ಗಿರಿಜಾ(31) ಅತ್ತಿಗೆಯನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ನಾದಿನಿಯಾಗಿದ್ದಾರೆ. ಆ ನಂತರ ಇವರೂ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪ್ರಿಯಾಂಕಾ ಹಾಗೂ ಗಿರಿಜಾ ನಡುವೆ ಪದೇ ಪದೇ ಜಗಳವಾಗುತ್ತಿತ್ತು. ಹೀಗಾಗಿ ಇಬ್ಬರೂ ನಿನ್ನೆ ಕೂಡ ಜಗಳ ಮಾಡಿಕೊಂಡಿದ್ದರು. ಸಂದರ್ಭದಲ್ಲಿ ಕೋಪದಲ್ಲಿಯೇ ಇದ್ದ ಗಿರಿಜಾ ತಡರಾತ್ರಿ ತನ್ನ ಅತ್ತಿಗೆಯನ್ನು ಕೊಲೆ ಮಾಡಿದ್ದಾಳೆ. ಈ ಕುರಿತು ಬಸರಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.