ವಿಜಯಸಾಕ್ಷಿ ಸುದ್ದಿ, ಬೀದರ್: ಜಿಲ್ಲೆಯ ಬಸವಕಲ್ಯಾಣದಲ್ಲಿ ಇಂದು ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು.
ಬಸವಕಲ್ಯಾಣದಲ್ಲಿ ನಡೆದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಬಸವಣ್ಣನ ಭಾವಚಿತ್ರಕ್ಕೆ ಯಡಿಯೂರಪ್ಪ ಪುಷ್ಪಾರ್ಚನೆ ಮಾಡಿದ ಬಳಿಕ ಗುದ್ದಲಿ ಪೂಜೆ ನೆರವೇರಿಸಿದರು.
ಸಿಎಂ ಯಡಿಯೂರಪ್ಪ ಅವರ ಜೊತೆ ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ ಕೆ.ಸುಧಾಕರ, ಪ್ರಭು ಚೌಹಾಣ್, ಎಂಪಿ ಭಗವಂತ ಖೂಬಾ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಪೂಜ್ಯ ಬಸವಲಿಂಗ ಪಟ್ಟದ್ದೇವರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ವರದಿ: ಅಬ್ದುಲ್ ರಜಾಕ್