ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ರಾಜ್ಯದಲ್ಲಿ ಕೊರೊನಾ ಹತೋಟಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ತೆರುವುಗೊಳಿಸಲಾಗುತ್ತಿದೆ. ಇತೀಚೆಗಷ್ಟೇ ಹಲವು ಜಿಲ್ಲೆಗಳಲ್ಲಿ ಅನ್ ಲಾಕ್ ಘೋಷಣೆ ಮಾಡಲಾಗಿತ್ತು. ಈಗ ಮತ್ತೆ 6 ಜಿಲ್ಲೆಗಳಲ್ಲಿ ಸರ್ಕಾರ ಅನ್ ಲಾಕ್ ಘೋಷಣೆ ಮಾಡಿದೆ.
ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲಿಯೂ ಅನ್ ಲಾಕ್ ವಿನಾಯಿತಿ ನೀಡಲಾಗಿದೆ. 2ನೇ ಹಂತದ ಕೊರೊನಾ ಪಾಸಿಟಿವಿಟಿ ರೇಟ್ ಆಧರಿಸಿ ಕೆಲವು ಜಿಲ್ಲೆಗಳಲ್ಲಿ ಮಾತ್ರ ನಿರ್ಬಂಧ ಸಡಿಲಿಸಿ ಬೆಳಿಗ್ಗೆಯಿಂದ ಸಂಜೆ 5ರ ವರೆಗೆ ಎಲ್ಲ ಅಂಗಡಿ –ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ.
ಇತ್ತೀಚೆಗಷ್ಟೇ ಸಿಎಂ ಯಡಿಯೂರಪ್ಪ, ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಜಿಲ್ಲೆ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅನ್ ಲಾಕ್ ತೆರವುಗೊಳಿಸಲಾಗಿತ್ತು. ಈಗ ಈ ಸಾಲಿಗೆ 6 ಜಿಲ್ಲೆಗಳು ಸೇರಿವೆ.