ಅರಬ್ಬಿ ಸಮುದ್ರ, ರಾಜ್ಯದಲ್ಲಿ ಸುರಿಯಲಿದೆ ಮಳೆ

0
Spread the love

ವಿಜಯಸಾಕ್ಷಿ ಸುದ್ದಿ, ನವದೆಹಲಿ

Advertisement

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಜೋರಾಗಲಿದು, ನಾಲ್ಕು ರಾಜ್ಯಗಳಲ್ಲಿ ಮೇ. 14 ಹಾಗೂ 15ರಂದು ಭರ್ಜರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಲಕ್ಷದ್ವೀಪಗಳಲ್ಲಿ ಉತ್ತಮವಾಗಿ ಸುರಿಯಲಿದೆ. ಮೇ. 16ರಂದು ಚಂಡಮಾರುತ ಪ್ರಭಾವ ಬೀರಲಿದೆ. ಪ್ರಾರಂಭದಲ್ಲಿ ಇದು ಪಶ್ಚಿಮ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಲಿದೆ. ಇದಕ್ಕೆ ‘ತೌಕ್ಟೇ’ ಎಂದು ಹೆಸರಿಡಲಾಗಿದೆ.

ಮೇ. 14ರ ಬೆಳಿಗ್ಗೆ ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಹಾಗೂ ಪಕ್ಕದ ಲಕ್ಷದ್ವೀಪ ಪ್ರದೇಶದಲ್ಲಿ ಅಲ್ಲದೇ, ಉತ್ತರ ಹಾಗೂ ವಾಯವ್ಯ ದಿಕ್ಕಿಗೆ ಚಂಡಮಾರುತ ಚಲಿಸುವ ಸಾಧ್ಯತೆ ಇದೆ. ಮೇ 15ರ ಸುಮಾರಿಗೆ ಒತ್ತಡ ತೀವ್ರಗೊಳ್ಳುವ ಸಾಧ್ಯತೆ ಇದೆ. ಮೇ 16ರ ಸುಮಾರಿಗೆ ಅರಬ್ಬಿ ಸಮುದ್ರದ ಪೂರ್ವ ಮಧ್ಯ ಭಾಗದಲ್ಲಿ ಚಂಡಮಾರುತದ ಬಿರುಗಾಳಿ ತೀವ್ರವಾಗಬಹುದು.

ಉತ್ತರ – ವಾಯವ್ಯ ದಿಕ್ಕಿನಲ್ಲಿ ಸಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಗುರುವಾರದಿಂದ ಸಮುದ್ರದ ಸ್ಥಿತಿ ಒರಟಾಗಲಿದೆ. ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಕೂಡ ಎಚ್ಚರಿಕೆ ನೀಡಲಾಗಿದೆ.


Spread the love

LEAVE A REPLY

Please enter your comment!
Please enter your name here