ಅಲೆಮಾರಿಗಳ ಹಸಿವು ನೀಗಿಸಿದ ಎಸ್ಪಿ ಯತೀಶ್ ಮಾನವೀಯ ಕಾರ್ಯಕ್ಕೆ ಶ್ಲಾಘನೆ! ಚಿತ್ರ ಸಹಿತ ಪೋಸ್ಟ್ ಪ್ರಕಟಿಸಿ ಹೆಮ್ಮೆ ವ್ಯಕ್ತಪಡಿಸಿದ ಕೇಂದ್ರ ವಾರ್ತಾ ಮತ್ತು ಪ್ರಚಾರ ಇಲಾಖೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಬೇರೆ ರಾಜ್ಯಗಳಿಂದ ಜಿಲ್ಲೆಗೆ ವಲಸೆ ಬಂದು ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ದುಡಿಮೆಗೆ ಅವಕಾಶ ಸಿಗದೆ, ಊಟಕ್ಕೂ ಪರದಾಡುತ್ತಿರುವ ಸ್ಥಿತಿಯನ್ನು ಗಮನಿಸಿದ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಹಾಗೂ ಅವರ ಪೊಲೀಸ್ ತಂಡದವರು ಈ ನಿರಾಶ್ರಿತರಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಿ ಮಾನವೀಯತೆ ಮೆರೆದಿದ್ದರು.

#IndiaFightsCorona ಎಂಬ ಹ್ಯಾಷ್ ಟ್ಯಾಗ್‌ನಲ್ಲಿ ಗದಗ ಎಸ್ಪಿ ಯತೀಶ್ ಹಾಗೂ ಸಿಬ್ಬಂದಿ ನಿರಾಶ್ರಿತರಿಗೆ ದಿನಸಿ ಹಾಗೂ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವ ಫೋಟೋ ಸಹಿತ ಪೋಸ್ಟ್ ಪ್ರಕಟಿಸಿರುವ ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ `Covid-19 Warriors of India’ ಎಂದು ಹೆಮ್ಮೆಯಿಂದ ಹೇಳಿಕೊಂಡಿದೆ.

ಇಂತಹ ಮಾನವೀಯ ಸೇವೆ ಇತರರಿಗೂ ಪ್ರೇರಣೆಯಾಗಿ, ಇನ್ನಷ್ಟು ದಾನಿಗಳು ಸಹಾಯ ಮಾಡಲು ಮುಂದಾಗಲಿ ಎಂಬ ಉದ್ದೇಶ ಈ ಪೋಸ್ಟ್ ಹಿಂದಿದೆ.

ಇದನ್ನೂ ಓದಿ ಸದ್ದಿಲ್ಲದೆ ಅಲೆಮಾರಿಗಳ ಹಸಿವು ನೀಗಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ !


ಯತೀಶ್ ಅವರ ಈ ಮಾನವೀಯ ಕಾರ್ಯವನ್ನು ವಿಜಯಸಾಕ್ಷಿ ವೆಬ್ ‘ ಸದ್ದಿಲ್ಲದೆ ಅಲೆಮಾರಿಗಳ ಹಸಿವು ನೀಗಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಶೀರ್ಷಿಕೆಯಲ್ಲಿ ಮೇ 15ರಂದು, ಹಾಗೂ ವಿಜಯಸಾಕ್ಷಿ ದಿನಪತ್ರಿಕೆಯ ಮೇ 16ರ ಸಂಚಿಕೆಯಲ್ಲಿ ಈ ಸುದ್ದಿಯನ್ನು ಪ್ರಕಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು.


Spread the love

LEAVE A REPLY

Please enter your comment!
Please enter your name here