ವಿಜಯಸಾಕ್ಷಿ ಸುದ್ದಿ, ಗದಗ
ಬೇರೆ ರಾಜ್ಯಗಳಿಂದ ಜಿಲ್ಲೆಗೆ ವಲಸೆ ಬಂದು ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ದುಡಿಮೆಗೆ ಅವಕಾಶ ಸಿಗದೆ, ಊಟಕ್ಕೂ ಪರದಾಡುತ್ತಿರುವ ಸ್ಥಿತಿಯನ್ನು ಗಮನಿಸಿದ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಹಾಗೂ ಅವರ ಪೊಲೀಸ್ ತಂಡದವರು ಈ ನಿರಾಶ್ರಿತರಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಿ ಮಾನವೀಯತೆ ಮೆರೆದಿದ್ದರು.
#IndiaFightsCorona ಎಂಬ ಹ್ಯಾಷ್ ಟ್ಯಾಗ್ನಲ್ಲಿ ಗದಗ ಎಸ್ಪಿ ಯತೀಶ್ ಹಾಗೂ ಸಿಬ್ಬಂದಿ ನಿರಾಶ್ರಿತರಿಗೆ ದಿನಸಿ ಹಾಗೂ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವ ಫೋಟೋ ಸಹಿತ ಪೋಸ್ಟ್ ಪ್ರಕಟಿಸಿರುವ ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ `Covid-19 Warriors of India’ ಎಂದು ಹೆಮ್ಮೆಯಿಂದ ಹೇಳಿಕೊಂಡಿದೆ.
ಇಂತಹ ಮಾನವೀಯ ಸೇವೆ ಇತರರಿಗೂ ಪ್ರೇರಣೆಯಾಗಿ, ಇನ್ನಷ್ಟು ದಾನಿಗಳು ಸಹಾಯ ಮಾಡಲು ಮುಂದಾಗಲಿ ಎಂಬ ಉದ್ದೇಶ ಈ ಪೋಸ್ಟ್ ಹಿಂದಿದೆ.
ಇದನ್ನೂ ಓದಿ ಸದ್ದಿಲ್ಲದೆ ಅಲೆಮಾರಿಗಳ ಹಸಿವು ನೀಗಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ !
ಯತೀಶ್ ಅವರ ಈ ಮಾನವೀಯ ಕಾರ್ಯವನ್ನು ವಿಜಯಸಾಕ್ಷಿ ವೆಬ್ ‘ ಸದ್ದಿಲ್ಲದೆ ಅಲೆಮಾರಿಗಳ ಹಸಿವು ನೀಗಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಶೀರ್ಷಿಕೆಯಲ್ಲಿ ಮೇ 15ರಂದು, ಹಾಗೂ ವಿಜಯಸಾಕ್ಷಿ ದಿನಪತ್ರಿಕೆಯ ಮೇ 16ರ ಸಂಚಿಕೆಯಲ್ಲಿ ಈ ಸುದ್ದಿಯನ್ನು ಪ್ರಕಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು.