ಅವಧಿ ಮೀರಿ ಅಂಗಡಿ ತೆರದರೆ 25 ಸಾವಿರ ದಂಡ; ಪವಾರ

0
Spread the love

ವಿಜಯಸಾಕ್ಷಿ ಸುದ್ದಿ, ನರಗುಂದ

Advertisement

ಮಹಾಮಾರಿ ಕೊರೊನಾ ತಡೆಗಟ್ಟಲು ಸರಕಾರದ ನಿಯಮಾವಳಿಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲಿಸಬೇಕು. ಒಂದು ವೇಳೆ ಅವಧಿ ಮೀರಿ ಅಂಗಡಿ ತೆರದರೆ 25 ಸಾವಿರದಿಂದ 50 ಸಾವಿರದವರೆಗೆ ದಂಡ ವಿಧಿಸಿ ಕೇಸ್ ಹಾಕಲಾಗುವುದು ಎಂದು ಗ್ರಾಮದ ವರ್ತಕರಿಗೆ ನರಗುಂದ ಠಾಣೆಯ ಎಎಸ್ ಐ ವಿ ಜಿ ಪವಾರ್ ಎಚ್ಚರಿಕೆ ನೀಡಿದರು.

ಅವರು ತಾಲೂಕಿನ ಚಿಕ್ಕನರಗುಂದ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಎಚ್ಚರಿಕೆ ನೀಡಿದರು.

ಗ್ರಾಮದಲ್ಲಿ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಅನಗತ್ಯವಾಗಿ ವಾಹನಗಳನ್ನು ತೆಗೆದುಕೊಂಡು ಓಡಾಡದಂತೆ ಮನವಿ ಮಾಡಿದರು. ಗ್ರಾಮ ಪಂಚಾಯತಿ ಅಧ್ಯಕ್ಷ ಮುತ್ತು ರಾಯರಡ್ಡಿ, ತಾ.ಪಂ.ಅಧ್ಯಕ್ಷ ವಿಠ್ಠಲ ತಿಮ್ಮರಡ್ಡಿ, ಗ್ರಾ.ಪಂ ಪಿ.ಡಿ.ಓ ಶೈನಾಜ್ ಮುಜಾವರ್, ಗ್ರಾ.ಪಂ ಸದಸ್ಯ ಬಾಪು ಹಿರೇಗೌಡ್ರ, ಗ್ರಾ.ಪಂ ಸಿಬ್ಬಂದಿಗಳು ಇದ್ದರು.


Spread the love

LEAVE A REPLY

Please enter your comment!
Please enter your name here