ಅವರಪ್ಪನಿಗೆ ಹುಟ್ಟಿದ್ರೆ ಸೀಡಿ ಬಿಡುಗಡೆ ಮಾಡಲಿ

0
Spread the love

Advertisement

ವಿಜಯಸಾಕ್ಷಿ ಸುದ್ದಿ, ವಿಜಯಪುರ

ಅವರಪ್ಪನಿಗೆ ಹುಟ್ಟಿದ್ರೆ ಸೀಡಿ ಬಿಡುಗಡೆ ಮಾಡಲಿ. ಏನೇ ಮಾಡಿದರೂ ಯತ್ನಾಳ್ ನ ಕುಗ್ಗಿಸಲು ಸಾಧ್ಯವಿಲ್ಲ. ನನ್ನ ಬಾಯಿ ಬಂದ್ ಮಾಡಲು ಯಾರಿಂದಲೂ ಸಾಧ್ಯ ಇಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿ ಕಾರಿದ್ದಾರೆ.

‌ಅಶ್ಲೀಲ ಸೀಡಿ ಬಿಡುಗಡೆ ಊಹಾಪೋಹ ವಿಚಾರವಾಗಿ ವಿಜಯಪುರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಜನ ಪರವಾಗಿ ಹೋರಾಟ ಮಾಡುವವನು. ಯಾವ ಭಯವೂ ಇಲ್ಲ.‌ ನೀರಾವರಿ ಇಲಾಖೆಯಲ್ಲಿ ನಡೆದ ಕೋಟ್ಯಾಂತರ ಅವ್ಯವಹಾರ, 12 ಪರ್ಸೆಂಟ್ ವಿಷಯ ಹೇಳಿದ್ದೇ ನಾನು. ಅದನ್ನೇ ಈಗ ಇನಕಂ ಟ್ಯಾಕ್ಸ್ ನವರು ಒಪ್ಪಿಕೊಂಡಿದ್ದಾರೆ.

ಇಂತಹ ಭ್ರಷ್ಟಾಚಾರಗಳನ್ನು ಹೊರ ತೆಗೆದಿದ್ದಕ್ಕೆ ಭಯಪಟ್ಟು ಕೃತಕ ಸೀಡಿ ತಯಾರಿಸಿದ್ದಾರೆ. ಈ ಪಿತೂರಿಯಲ್ಲಿ ನಮ್ಮ‌ ಪಕ್ಷದವರು ಸೇರಿದಂತೆ ಸರ್ವ ಪಕ್ಷದವರು ಇದ್ದಾರೆ. ಇದಕೆಲ್ಲ ನಾನು ಹೆದರಲ್ಲ. ಇದರ ಬಗ್ಗೆ ಪೊಲೀಸ್ ಇಲಾಖೆ ಕ್ರಮ ತೆಗೆದುಕೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.


Spread the love

LEAVE A REPLY

Please enter your comment!
Please enter your name here