ಆರೋಗ್ಯ ಇಲಾಖೆಯ ಯಡವಟ್ಟು; ಗ್ರಾಮದಲ್ಲಿ ಮನೆ ಮಾಡಿದ ಆತಂಕ!

0
Spread the love

ವಿಜಯಸಾಕ್ಷಿ ಸುದ್ದಿ, ಹಾವೇರಿ

Advertisement

ರಾಜ್ಯದಲ್ಲಿ ಈಗಾಗಲೇ ಕೊರೊನಾ 2ನೇ ಅಲೆ ಶುರುವಾಗಿದೆ. ಹಳ್ಳಿ ಹಳ್ಳಿಗೂ ಕೊರೊನಾ ಲಗ್ಗೆಯಿಟ್ಟಿದೆ. ಲಸಿಕೆ, ಚಿಕಿತ್ಸೆಯ ಕೊರತೆಗಳ ಮಧ್ಯೆ ಜನ ಪ್ರಾಣ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಈ ಸಂದರ್ಭದಲ್ಲಿಯೇ ಆರೋಗ್ಯ ಇಲಾಖೆಯ ಮತ್ತೊಂದು ಯಡವಟ್ಟು ಬೆಳಕಿಗೆ ಬಂದಿದೆ.
ಕೊವೀಡ್ ನಿಂದ ಮೃತಪಟ್ಟ ವ್ಯಕ್ತಿಯ ಶವವನ್ನು ಕೊರೊನಾದಿಂದ ಸತ್ತಿಲ್ಲ ಎಂದು ಆರೋಗ್ಯ ಇಲಾಖೆಯ ಸಿಬ್ಬಂದಿ ಶವವನ್ನು ಹಸ್ತಾಂತರ ಮಾಡಿದ್ದಾರೆ. ಈ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕೆರವಡಿ ಗ್ರಾಮದಲ್ಲಿ ನಡೆದಿದೆ. ಸದ್ಯ ನಿಜ ಸಂಗತಿ ತಿಳಿಯುತ್ತಿದ್ದಂತೆ ಜನ ಆತಂಕದಲ್ಲಿ ಬದುಕುವಂತಾಗಿದೆ.

ಮೇ. 10ರಂದು ಗ್ರಾಮದ 50 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದರು. ಆದರೆ, ಅನಾರೋಗ್ಯದಿಂದ ಮೃತಪಟ್ಟಿದ್ದಾನೆ ಎಂದು ಮೃತ ದೇಹವನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಅಂತ್ಯಕ್ರಿಯೆ ಮುಗಿದ ಮೂರು ದಿನಗಳ ನಂತರ ಮೃತನ ವರದಿ ಬಂದಿದ್ದು, ಅದರಲ್ಲಿ ಕೊರೊನಾ ಪಾಸಿಟಿವ್ ಇದೆ ಎನ್ನಲಾಗಿದೆ. ಹೀಗಾಗಿ ಇಡೀ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ.

ಕೊರೊನಾ ಇಲ್ಲವೆಂದು ಅಂತ್ಯಕ್ರಿಯೆಯಲ್ಲಿ ಸಂಬಂಧಿಕರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ಆರೋಗ್ಯ ಇಲಾಖೆ, ಸರಿಯಾದ ಮಾಹಿತಿ ನೀಡಿದ್ದರೆ ನಾವು ಕೊರೊನಾ ನಿಯಮಾವಳಿ ಪ್ರಕಾರ ಅಂತ್ಯಕ್ರಿಯೆ ಮಾಡುತ್ತಿದ್ದೇವು ಎಂದು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here