ಆರ್ಥಿಕ ತೊಂದರೆಯಲ್ಲಿರುವ 3 ಸಾವಿರ ಸಿನಿಮಾ ಕಾರ್ಮಿಕರ ಬೆನ್ನಿಗೆ ನಿಂತ ನಟ ಯಶ್!

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ಕೊರೊನಾದಿಂದಾಗಿ ಎಲ್ಲ ವರ್ಗದ ಜನರ ಬದುಕು ಬೀದಿಗೆ ಬಂದು ನಿಂತಿದೆ. ಸದ್ಯ ಲಾಕ್ ಡೌನ್ ಜಾರಿಯಲ್ಲಿರುವುದರಿಂದಾಗಿ ಚಿತ್ರರಂಗದ ಕಾರ್ಮಿಕರು ಮತ್ತು ತಂತ್ರಜ್ಞರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.  ನಟ ಯಶ್ ಅವರು ಚಿತ್ರರಂಗದ ಕಾರ್ಮಿಕರಿಗೆ ನೆರವು ನೀಡಲು ಮುಂದಾಗಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಯಶ್, ಕನ್ನಡ ಚಿತ್ರರಂಗದ ಮೂರು ಸಾವಿರ ಕಾರ್ಮಿಕರಿಗೆ ತಲಾ ರೂ. 5 ಸಾವಿರದಂತೆ  ಬರೋಬ್ಬರಿ 3 ಸಾವಿರ ಜನರಿಗ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. “ಕಣ್ಣಿಗೆ ಕಾಣದ ವೈರಸ್ ಮನುಷ್ಯನ ಬದುಕನ್ನು ಬುಡಮೇಲು ಮಾಡಿದ್ದು, ಕಳೆದ ಒಂದು ವರ್ಷದಿಂದ ನನ್ನ ಸಿನಿಮಾ ಕುಟುಂಬ ಅಸಹಾಯಕತೆಯಿಂದ ಕೈಕಟ್ಟಿ ಕುಳಿತಿದೆ. ಇದು ಮಾತನಾಡುವ ಸಮಯವಲ್ಲ. ಸಂಕಷ್ಟದಲ್ಲಿರುವವನ ಜೊತೆ ನಿಲ್ಲುವ ಸಮಯವಾಗಿದೆ.

ಹಾಗಾಗಿ, 3000ಕ್ಕೂ ಹೆಚ್ಚು ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ಮೂರು ಸಾವಿರ ರೂಪಾಯಿಗಳನ್ನು ನನ್ನ ಸಂಪಾದನೆಯ ಹಣದಿಂದ ಭರಿಸಲು ನಿರ್ಧರಿಸಿದ್ದೇನೆ. ನಮ್ಮ ಒಕ್ಕೂಟದ ಅಧ್ಯಕ್ಷರಾದ ಸಾ.ರಾ. ಗೋವಿಂದು ಮತ್ತು ಪ್ರಧಾನ ಕಾರ್ಯದರ್ಶಿ ರವೀಂದ್ರನಾಥ್ ಅವರೊಂದಿಗೆ ಚರ್ಚಿಸಿದ್ದೇನೆ.

ತಕ್ಷಣವೇ ತೊಂದರೆಯಲ್ಲಿರುವ 3000 ಕ್ಕೂ ಅಧಿಕ ಕಾರ್ಮಿಕರ ಖಾತೆಗೆ ತಲಾ 5 ಸಾವಿರ ರೂಪಾಯಿ ಜಮಾ ಮಾಡಲಾಗುವುದು ಎಂದು ಯಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here