ವಿಜಯಸಾಕ್ಷಿ ಸುದ್ದಿ, ತುಮಕೂರು
ಜಿಲ್ಲೆಯ ನ್ಯಾಯವಾದಿಯೊಬ್ಬರು ಕಾಲು ಮುರಿದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಕೊರೊನಾದಿಂದ ಅವರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕೊರಟಗೆರೆಯ ನ್ಯಾಯವಾದಿ ಬಿ.ಕೆ. ನಾರಾಯಣ್(52) ಸೋಂಕಿಗೆ ಬಲಿಯಾದ ದುರ್ದೈವಿ. ಇವರು ನಗರದಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಇತ್ತೀಚೆಗಷ್ಟೇ ವಕೀಲ ಬಿ.ಕೆ. ನಾರಾಯಣ್ ಅವರು ಬಾತ್ ರೂಂನಲ್ಲಿ ಬಿದ್ದು ಕಾಲು ಮುರಿದುಕೊಂಡಿದ್ದರು. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಅಲ್ಲಿ ತೆರಳುತ್ತಿದ್ದಂತೆ ಅವರಲ್ಲಿ ಕೋವಿಡ್ ಕಂಡು ಬಂದಿದೆ. ಆ ನಂತರ ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.