HomeKarnataka Newsಇಂದು ರಾಜ್ಯದಲ್ಲಿ ಎಷ್ಟು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ?

ಇಂದು ರಾಜ್ಯದಲ್ಲಿ ಎಷ್ಟು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ?

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ಇಂದು 20,378 ಜನರಲ್ಲಿ ಸೋಂಕು ಕಾಣಿಸೊಂಡಿದ್ದು, 382 ಜನರು ಬಲಿಯಾಗಿದ್ದಾರೆ. ಅಲ್ಲದೇ, 28,053 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈ ನಿಟ್ಟಿನಲ್ಲಿ ರಾಜ್ಯದಲ್ಲಿ 3,42,010 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದಿನ 382 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 28,679 ಜನ ಸಾವನ್ನಪ್ಪಿದ್ದಾರೆ.

ರಾಜಧಾನಿಯಲ್ಲಿ ಕೊರೊನಾ ಸಂಖ್ಯೆ ಇಳಿಕೆಯಾಗಿದ್ದು, 4,734 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, ಇಂದು 213 ಜನರು ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ ರಾಜ್ಯದ ಬಾಗಲಕೋಟೆ 193, ಬಳ್ಳಾರಿ 598, ಬೆಳಗಾವಿ 1,171, ಬೆಂಗಳೂರು ಗ್ರಾಮಾಂತರ 392, ಬೆಂಗಳೂರು ನಗರ 4,734, ಬೀದರ್ 37, ಚಾಮರಾಜನಗರ 402, ಚಿಕ್ಕಬಳ್ಳಾಪುರ 356, ಚಿಕ್ಕಮಗಳೂರು 671, ಚಿತ್ರದುರ್ಗ 805, ದಕ್ಷಿಣ ಕನ್ನಡ 727, ದಾವಣಗೆರೆ 698, ಧಾರವಾಡ 525, ಗದಗ 289, ಹಾಸನ 2,227, ಹಾವೇರಿ 206, ಕಲಬುರಗಿ 107, ಕೊಡಗು 271, ಕೋಲಾರ 341, ಕೊಪ್ಪಳ 365, ಮಂಡ್ಯ 643, ಮೈಸೂರು 1,559, ರಾಯಚೂರು 278, ರಾಮನಗರ 164, ಶಿವಮೊಗ್ಗ 386, ತುಮಕೂರು 773, ಉಡುಪಿ 651, ಉತ್ತರ ಕನ್ನಡ 504, ವಿಜಯಪುರ 198, ಮತ್ತು ಯಾದಗಿರಿಯಲ್ಲಿ 107 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!