ಇಂದು ಸಂಜೆಯಿಂದ ಸೋಮವಾರದವರೆಗೂ ವೀಕೆಂಡ್ ಕರ್ಫ್ಯೂ; ಡಿಸಿ ಸುಂದರೇಶ್ ಬಾಬು

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ರಾಜ್ಯದಲ್ಲಿ ಕೊರೊನಾ ವೈರಸ್ ಸಧ್ಯ ನಿಯಂತ್ರಣಕ್ಕೆ ಬರುತ್ತಿದೆ. ಇದರ ಮಧ್ಯೆ ಸರ್ಕಾರ 19 ಜಿಲ್ಲೆಗಳಲ್ಲಿ ಇಂದು ಸಂಜೆ 7 ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಪ್ಯೂ ಜಾರಿ ಮಾಡಿದೆ. ಈ ನಿಟ್ಟಿನಲ್ಲಿ ಗದಗ ಜಿಲ್ಲೆಯಲ್ಲೂ ಕೂಡ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಸುಂದರೇಶ್ ಬಾಬು ಆದೇಶ ಹೊರಡಿಸಿದ್ದಾರೆ.

ವೀಕೆಂಡ್ ಕರ್ಫ್ಯೂವಿನಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಹಾಲು, ಹಣ್ಣು, ತರಕಾರಿ, ಮಾಂಸ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಅಗತ್ಯ ವಸ್ತುಗಳ ಪೂರೈಕೆ, ಅಂಗಡಿ ತೆರೆಯಲು, ಹಾಗೂ ವೈದ್ಯಕೀಯ ಸೇವಾ ವಲಯ ಸಂಚಾರಕ್ಕೆ ಯಾವುದೇ ಅಡ್ಡಿ ಇರುವುದಿಲ್ಲ. ಸಾರ್ವಜನಿಕರ ಅನಗತ್ಯ ಓಡಾಟಕ್ಕೆ ಮಾತ್ರ ಕಟ್ಟುನಿಟ್ಟಿನ ನಿಷೇಧ ಹೇರಲಾಗಿದೆ. ಹೀಗಾಗಿ ಗದಗ ಜಿಲ್ಲೆಯಲ್ಲಿ ಕೂಡ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಿದೆ.

ವೀಕೆಂಡ್ ಕರ್ಫ್ಯೂನಲ್ಲಿ ಯಾವುದಕ್ಕೆಲ್ಲಾ ಅವಕಾಶ?
• ಅಗತ್ಯ ವಸ್ತುಗಳ ಉತ್ಪಾದನೆಯ ಎಲ್ಲಾ ಕೈಗಾರಿಕೆಗಳು, ಸಂಸ್ಥೆಗಳಿಗೆ ಅವಕಾಶ.
• ಎಲ್ಲಾ ಕೇಂದ್ರ-ರಾಜ್ಯ ಸರ್ಕಾರದ ಕಚೇರಿಗಳು ತೆರೆಯಲಿವೆ.
• ಕೋವಿಡ್ ಸಂಬಂಧಿತ ಕೆಲಸ ಮಾಡುವ ಕಂಪನಿಗಳು ಓಪನ್.
• ಟೆಲಿಕಾಂ ಹಾಗೂ ಇಂಟರ್ ನೆಟ್ ಸರ್ವೀಸ್ ಪೂರೈಕೆದಾರರ ಓಡಾಟಕ್ಕೆ ಅವಕಾಶ.
• ರೋಗಿಗಳು, ಅವರ ಕುಟುಂಬಸ್ಥರು ಹಾಗೂ ವ್ಯಾಕ್ಸಿನೇಷನ್ ಹಾಕಿಸಿಕೊಳ್ಳುವವರಿಗೆ ಸಂಬಂಧಪಟ್ಟ ಪ್ರೂಫ್ ತೋರಿಸಿ ಓಡಾಟಕ್ಕೆ ಅವಕಾಶ ನೀಡಲಾಗಿದೆ.
• ರೈಲು ವಿಮಾನ ಸಂಚಾರ ಇರಲಿದೆ..
• ಬಾರ್ ತೆರೆಯಲು ಕೂಡ ಅವಕಾಶವಿದ್ದು, ಮಧ್ಯಾಹ್ನ 2ರ ವರೆಗೆ ಎಂದಿನಂತೆ ಪಾರ್ಸೆಲ್ ಗೆ ಅವಕಾಶವಿದೆ. ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಗೆ ಅವಕಾಶ.
• ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಐದು ಜನಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

ಜಿಲ್ಲಾಡಳಿತ ಕೂಡ ಅನಾವಶ್ಯಕವಾಗಿ ಜನರ ಓಡಾಟಕ್ಕೆ ಬ್ರೇಕ ಹಾಕಿದೆ. ಅನಾವಶ್ಯಕವಾಗಿ ಓಡಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಹೀಗಾಗಿ ಜಿಲ್ಲೆಯಲ್ಲಿ ಇಂದು ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 5ರ ವರೆಗೆ ಕಟ್ಟುನಿಟ್ಟಿನ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಸುಂದರೇಶ್ ಬಾಬು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here