ಇಡೀ ಭಾರತದಿಂದ ಕೊರೋನಾ ತೊಲಗಲಿ; ಯುಗಾದಿ ಶುಭಾಶಯ ತಿಳಿಸಿದ ಮಹಾಮಂಡಳ ರಾಜ್ಯಾಧ್ಯಕ್ಷ

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ಇಡೀ ಭಾರತದಿಂದ ಕೊರೋನಾ ಮುಕ್ತಿ ಪಡೆದು ಎಲ್ಲರೂ ಕ್ಷೇಮ ಹಾಗೂ ಆರೋಗ್ಯವಾಗಿರಲಿ ಎಂದು ಕರ್ನಾಟಕ ಪಿಂಜಾರ್ ನದಾಫ್ ಮನ್ಸೂರಿ ಸಂಘಗಳ ಮಹಾಮಂಡಳದ ರಾಜ್ಯಾಧ್ಯಕ್ಷ ಡಾ. ಅಬ್ದುಲ್ ರಜಾಕ್ ನದಾಫ್ ಅವರು ಯುಗಾದಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.

ಈ ಬಗ್ಗೆ ಶುಭಕೋರಿದ ಅವರು, ತಂದೆ ತಾಯಿ ರಾಯರ ಕೃಪೆಯಿಂದ ಈ ಸಂವತ್ಸರ ಸಮಸ್ತ ಮನುಕುಲದಮನೋವಾಂಛ ಫಲಗಳನ್ನು ಈಡೇರಿಸಿ ನಮ್ಮನ್ನು ಕಾಡುತ್ತಿರುವ ಕೊರೋನಾ ಭಾರತದಿಂದ ತೊಲಗಿ, ಹೊಸ ಕಾಲದ ಆದಿಯೇ,
ಲೋಕದ ಜನರ ಕಷ್ಟಗಳ ನೀಗುತ್ತಾ ಬಾ…
ಆರೋಗ್ಯದ ಭಾಗ್ಯವನ್ನು ಕರುಣಿಸು ಬಾ…
ಎಲ್ಲರ ಬಾಳಲ್ಲಿ ಹೊಸ ವರ್ಷದ ಉತ್ಸಾಹ ತುಂಬುತ್ತಾ ಬಾ.

ಈ ಹೊಸತನ, ನಿರೀಕ್ಷೆ, ಭರವಸೆಗಳನ್ನು ಹೊತ್ತು ಕಳೆದ ವರ್ಷದ ತೊಡಕುಗಳು ಈ ಹೊಸ ವರ್ಷ ನೀಗಲಿ. ಬೇವು-ಬೆಲ್ಲದ ಅನುಭವಗಳು ಈ ವರ್ಷ ಸಮನಾಗಿರಲಿ ಎಂದರು.

ಈ ಶುಭ ವರ್ಷ ಎಲ್ಲರಿಗೂ ಒಳಿತು ತರಲೆಂದು ಭಗವಂತನಲ್ಲಿ ನಾನು ಕೋರುತ್ತೇನೆ ಎಂದು ನಾಡಿನ ಸಮಸ್ತರಿಗೂ ಯುಗಾದಿ-ಹೊಸ ವರ್ಷದ ಶುಭಾಶಯಗಳನ್ನು ರಾಜ್ಯಾಧ್ಯಕ್ಷ ಡಾ. ಅಬ್ದುಲ್ ರಜಾಕ್ ತಿಳಿಸಿದ್ದಾರೆ


Spread the love

LEAVE A REPLY

Please enter your comment!
Please enter your name here