ಇದು ಕರುನಾಡ? ಅಥವಾ ಕೊರೊನಾಡ?

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ರಾಜ್ಯದಲ್ಲಿ ಇಂದು ಮಹಾಮಾರಿ ಸ್ಫೋಟಗೊಂಡಿದೆ. ಇಂದು ಬರೋಬ್ಬರಿ ರಾಜ್ಯದಲ್ಲಿ 49,058 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೆ, ಸಾವಿನ ಸಂಖ್ಯೆಯಲ್ಲಿಯೂ ದಾಖಲೆ ಬರೆದಿದೆ.
ಇಂದು ರಾಜ್ಯದಲ್ಲಿ 328 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಇಂದು 23,706 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 139 ಜನ ಬಲಿಯಾಗಿದ್ದಾರೆ.

ಇಂದು 18,943 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸೋಂಕಿತರ ಸಂಖ್ಯೆ 17,90,104ಕ್ಕೆ ಏರಿಕೆ ಕಂಡಿದೆ. ಮೃತರ ಸಂಖ್ಯೆ 17,212ಕ್ಕೆ ಏರಿಕೆ ಕಂಡಿದೆ.

ಇಂದು ರಾಜ್ಯದ ಬಾಗಲಕೋಟೆ 665, ಬಳ್ಳಾರಿ 922, ಬೆಳಗಾವಿ 843, ಬೆಂಗಳೂರು ಗ್ರಾಮಾಂತರ 963, ಬೆಂಗಳೂರು ನಗರ 23,706, ಬೀದರ್ 336, ಚಾಮರಾಜನಗರ 707, ಚಿಕ್ಕಬಳ್ಳಾಪುರ 609, ಚಿಕ್ಕಮಗಳೂರು 452, ಚಿತ್ರದುರ್ಗ 126, ದಕ್ಷಿಣ ಕನ್ನಡ 1,191, ದಾವಣಗೆರೆ 672, ಧಾರವಾಡ 824, ಗದಗ 191, ಹಾಸನ 1,403, ಹಾವೇರಿ 236, ಕಲಬುರಗಿ 1,652, ಕೊಡಗು 697, ಕೋಲಾರ 756, ಕೊಪ್ಪಳ 357, ಮಂಡ್ಯ 1,301, ಮೈಸೂರು 2,531, ರಾಯಚೂರು 819, ರಾಮನಗರ 413, ಶಿವಮೊಗ್ಗ 635, ತುಮಕೂರು 2,418, ಉಡುಪಿ 1,526, ಉತ್ತರ ಕನ್ನಡ 734, ವಿಜಯಪುರ 662 ಮತ್ತು ಯಾದಗಿರಿಯಲ್ಲಿ 721 ಕೊರೊನಾ ಪ್ರಕರಣಗಳು ವರದಿಯಾಗಿವೆ.


Spread the love

LEAVE A REPLY

Please enter your comment!
Please enter your name here