ಇನ್ಸ್‌ಪೆಕ್ಟರ್ ಸಿದ್ದಲಿಂಗಪ್ಪಗೌಡ ಪಾಟೀಲ್ ಡಿವೈಎಸ್ಪಿಯಾಗಿ ಬಡ್ತಿ

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ಗದಗನ ಹೆಸ್ಕಾಂ ಜಾಗೃತದಳದಲ್ಲಿ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ದಲ್ಲಿದ್ದ ಸಿದ್ದಲಿಂಗಪ್ಪಗೌಡ ಪಾಟೀಲ್ ಅವರು ಡಿವೈಎಸ್ಪಿ ಆಗಿ ಬಡ್ತಿ ಹೊಂದಿದ್ದಾರೆ.

ರಾಜ್ಯ ಪೊಲೀಸ್ ಇಲಾಖೆಯ ಸಿಪಿ(ಸಿವಿಲ್) ವೃಂದದ ಅಧಿಕಾರಿಗಳನ್ನು ತಕ್ಷಣವೇ ಜಾರಿಗೆ ಬರುವಂತೆ ವೇತನ ಡಿವೈಎಸ್ಪಿ ವೃಂದಕ್ಕೆ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಧಾರವಾಡ ಜಿಲ್ಲಾ ಸಿಇಎನ್ ವಿಭಾಗದಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ವಿಜಯ ಬಿರಾದರ್ ಅವರಿಗೂ ಡಿವೈಎಸ್ಪಿ ಹುದ್ದೆಗೆ ಬಡ್ತಿ ಆಗಿದೆ. ಇವರಲ್ಲದೇ ಇನ್ನೂ 27 ಜನ ಇನ್ಸ್‌ಪೆಕ್ಟರ್ ಗಳನ್ನು ರಾಜ್ಯ ಸರ್ಕಾರ ಡಿವೈಎಸ್ಪಿ ಹುದ್ದೆಗೆ ಬಡ್ತಿ ನೀಡಿ ಆದೇಶ ಹೊರಡಿಸಿದೆ. ಸದ್ಯ ಡಿಜಿ ಹಾಗೂ ಐಜಿಪಿ ಅವರಲ್ಲಿ ವರದಿ ಮಾಡಿಕೊಳ್ಳಲು ಆದೇಶದಲ್ಲಿ ತಿಳಿಸಲಾಗಿದೆ.

ಡಿವೈಎಸ್ಪಿಯಾಗಿ ಬಡ್ತಿ ಹೊಂದಿದ ಸಿದ್ದಲಿಂಗಪ್ಪಗೌಡ ಪಾಟೀಲ್ ಹಾಗೂ ವಿಜಯ ಬಿರಾದಾರ ಅವರನ್ನು ಸಿಬ್ಬಂದಿ ವರ್ಗ, ಸ್ನೇಹಿತರು ಹಾಗೂ ಹಿತೈಷಿಗಳು ಅಭಿನಂದಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here