ವಿಜಯಸಾಕ್ಷಿ ಸುದ್ದಿ, ಭೋಪಾಲ್
ಕೊರೊನಾ ರೋಗಿಗಳು ಆಸ್ಪತ್ರೆಗಳಿಗೆ ತೆರಳಲು ಭಯಪಟ್ಟು ಹಳ್ಳಿಯ ಹೊಲಗಳಲ್ಲಿ ಮರಗಳ ಕೆಲಕೆ ಚಿಕಿತ್ಸೆ ಪಡೆಯುತ್ತಿರುವ ಸಂಗತಿ ಮಧ್ಯಪ್ರದೇಶದಲ್ಲಿ ಕಂಡು ಬಂದಿದೆ.
ಆ ರಾಜ್ಯದ ಅಗರ್ – ಮಾಲ್ವಾ ಜಿಲ್ಲೆಯ ಹಳ್ಳಿಗಳಲ್ಲಿ ರಸ್ತೆಯ ಪಕ್ಕದಲ್ಲಿಯೇ ಕೊರೊನಾ ಸೋಂಕಿತರು ಮಲಗಿದ್ದಾರೆ. ಮರಗಳಿಗೆ ಡ್ರಿಪ್ ಬಾಟಲಿಗಳನ್ನು ತೂಗಿ ಹಾಕಿ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ಈ ಭಾಗದ ಗ್ರಾಮಗಳಲ್ಲಿನ ಜನರಲ್ಲಿ ಜ್ವರ – ನೆಗಡಿ ಹೆಚ್ಚಾಗಿ ಕಂಡು ಬರುತ್ತಿದೆ. ಆದರೆ, ಜನ ಮಾತ್ರ ಆಸ್ಪತ್ರೆಗೆ ತೆರಳಲು ಹಿಂಜರಿಯುತ್ತಿದ್ದಾರೆ. ಅಲ್ಲಿ ಸರಿಯಾಗಿ ಚಿಕಿತ್ಸೆ ಸಿಗುವುದಿಲ್ಲ. ಹೀಗಾಗಿ ನಾವು ಅಲ್ಲಿಗೆ ಹೋಗುವುದಿಲ್ಲ ಎಂದು ಜನರು ಅವಲೊತ್ತಿಕೊಳ್ಳುತ್ತಿದ್ದಾರೆ. ಹೀಗಾಗಿ ಸ್ಥಳೀಯ ವೈದ್ಯರಿಂದಲೇ ಚಿಕಿತ್ಸೆ ಪಡೆಯುತ್ತೇವೆ ಎಂದು ಸ್ಥಳೀಯರು ಹೇಳಿದ್ದಾರೆ.
ಸ್ಥಳೀಯ ವೈದ್ಯರ ವಿರುದ್ಧ ಕ್ರಮಕೈಗೊಳ್ಳುತ್ತೇವೆ. ನೆಗಡಿ, ಕೆಮ್ಮು ಲಕ್ಷಣಗಳು ಕಂಡು ಬಂದ ತಕ್ಷಣ ಸರ್ಕಾರಿ ವೈದ್ಯರನ್ನು ಭೇಟಿ ಮಾಡಿ ಎಂದು ಆರೋಗ್ಯಾಧಿಕಾರಿ ಮನಿಶ್ ಕುರ್ಲಿ ತಿಳಿಸಿದ್ದಾರೆ.