ವಿಜಯಸಾಕ್ಷಿ ಸುದ್ದಿ, ಕಲಬುರಗಿ
Advertisement
ನಮ್ಮಲ್ಲಿನ ವಾದ – ವಿವಾದ ಮುಗಿದಿದೆ. ಸದ್ಯ ನಾವು ಜಡ್ಜಮೆಂಟ್ ನಿರೀಕ್ಷೆಯಲ್ಲಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.
ನಗರದಲ್ಲಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕೊರೊನಾ ಮಾರ್ಗಸೂಚಿಯಂತೆಯೇ ನಮ್ಮ ಹೈಕಮಾಂಡ್ ಮಾರ್ಗಸೂಚಿ ನೀಡುತ್ತದೆ ಎಂಬ ಆಶಾಭಾವನೆ ಇದೆ. ನನ್ನ ಭಾವನೆಗಳನ್ನು ನಾನು ಹೈಕಮಾಂಡ್ ಮುಂದೆ ಹೇಳಿಕೊಂಡಿದ್ದೇನೆ ಎಂದು ಹೇಳಿದ್ದಾರೆ.
ಜಡ್ಜ್ ಮೆಂಟ್ ಏನು ಬರುತ್ತದೆಯೋ ಕಾಯ್ದು ನೋಡಬೇಕಿದೆ. ಸದ್ಯಕ್ಕೆ ನಮ್ಮ ಪಕ್ಷದಲ್ಲಿ ಯಾವ ರೀತಿ ಗೊಂದಲಗಳಿಲ್ಲ. ಏನಾದರೂ ಸಮಸ್ಯೆಗಳಿದ್ದರೆ ನಾವೆಲ್ಲ ಸರಿಪಡಿಸಿಕೊಂಡು ಹೋಗುತ್ತೇವೆ ಎಂದು ಹೇಳಿದ್ದಾರೆ.