ಈಶ್ವರಪ್ಪಗೆ ಸಂಸ್ಕಾರ, ಸಂಸ್ಕೃತಿಯೇ ಗೊತ್ತಿಲ್ಲ; ಸಿದ್ದರಾಮಯ್ಯ

0
Spread the love

ವಿಜಯಸಾಕ್ಷಿ ಸುದ್ದಿ, ಮೈಸೂರು

Advertisement

ಈಶ್ವರಪ್ಪ ಮೊದಲಿನಿಂದಲೂ ಹೀಗೆಯೇ ಮಾತನಾಡುತ್ತಿದ್ದಾರೆ. ಅವರಿಗೆ ಸಂಸ್ಕೃತಿಯೇ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ಕೆ.ಎಸ್. ಈಶ್ವರಪ್ಪ ಅವಾಚ್ಯ ಶಬ್ದ ಬಳಕೆ ವಿಚಾರಕ್ಕೆ ಮೈಸೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿಯವರ ಸಂಸ್ಕತಿಯೇ ಇಂತದ್ದು. ಈಶ್ವರಪ್ಪರಿಗೆ ಬಿಜೆಪಿ ಬುದ್ಧಿ ಹೇಳುವ ಕೆಲಸ ಮಾಡುತ್ತಿಲ್ಲ. ಸಂಸ್ಕಾರ ಇರುವವರು ಅಂತಹ ಪದವನ್ನು ಬಯಸುವುದಿಲ್ಲ. ಈಶ್ವರಪ್ಪನಿಗೆ ಸಂಸ್ಕಾರ, ಸಂಸ್ಕತಿಯೇ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಶ್ವರಪ್ಪ ಬೆಳೆದು ಬಂದಿರುವ ಹಾದಿಯೇ ಹಾಗಿದೆ. ಅವರಿಂದ ಬದಲಾವಣೆ ನಿರೀಕ್ಷೆ ಮಾಡುವುದೇ ತಪ್ಪು. ಆಡಳಿತದಲ್ಲಿರುವವರು ಟೀಕೆಗಳನ್ನು ಆರೋಗ್ಯ ಪೂರ್ಣವಾಗಿ ಸ್ವೀಕರಿಸಬೇಕು. ರಾಜಕಾರಣದಲ್ಲಿ ಟೀಕೆ ಬರುವುದು ಸಹಜ. ಅದಕ್ಕೆ ಈ ರೀತಿ ಪ್ರತಿಕ್ರಿಯೆ ನೀಡೋದು ಸರಿಯಲ್ಲ ಎಂದರು.


Spread the love

LEAVE A REPLY

Please enter your comment!
Please enter your name here