ಉಕ್ರೇನ್-ರಷ್ಯಾ ದೇಶಗಳ ಮಧ್ಯೆ ಯುದ್ಧ: ಉಕ್ರೇನ್‌ನಲ್ಲಿ ಸಿಲುಕಿಕೊಂಡ ಗದಗ ಜಿಲ್ಲೆಯ ವಿದ್ಯಾರ್ಥಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ:

Advertisement

ರಷ್ಯಾ ಉಕ್ರೇನ್ ದೇಶಗಳ ಮಧ್ಯೆ ಯುದ್ಧ ಶುರುವಾಗಿದ್ದು, ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಯುವಕನೋರ್ವ ಸೇರಿದಂತೆ ಅನೇಕ ಭಾರತೀಯ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಇದರಿಂದ ಪಾಲಕರು ಆತಂಕಗೊಂಡಿದ್ದಾರೆ.

ಹೌದು, ಮುಂಡರಗಿ ಪಟ್ಟಣದ ಮಹಾಗಣಪತಿ ಬಿಳಿಮಗ್ಗದ ಎಂಬ ವಿದ್ಯಾರ್ಥಿ ಉಕ್ರೇನ್ ದೇಶದ ಕೀವ್ ರಾಜಧಾನಿಯ ಚೆರ್ನಿವೀಸ್ ನಗರದಲ್ಲಿ ಸಿಲುಕಿಕೊಂಡಿದ್ದು, ತಮ್ಮ ಮಗ ಸುರಕ್ಷಿತವಾಗಿದ್ದಾನೆ ಎಂದು ಪಾಲಕರು ಹೇಳುತ್ತಿದ್ದಾರೆ. ಮಹಾಗಣಪತಿ ಬಿಳಿಮಗ್ಗದ ಚೆರ್ನಿವೀಸ್ ನಗರದ ಬೋಕೋವಿನಿಯನ್ ಸ್ಟೇಟ್ ಮೆಡಿಕಲ್ ವಿಶ್ವವಿದ್ಯಾಲಯದಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ.

ರಷ್ಯಾ ಉಕ್ರೇನ್ ಮಧ್ಯೆ ಯುದ್ಧ ಆರಂಭವಾಗಿರುವುದರಿಂದ ವಿಮಾನಯಾನ ರದ್ದಾಗಿದ್ದು, ಉಕ್ರೇನ್‌ನಲ್ಲಿ ನೆಲೆಸಿರುವ ಭಾರತೀಯ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here