ವಿಜಯಸಾಕ್ಷಿ ಸುದ್ದಿ, ಛತ್ತೀಸಗಢ
ವರದಿ:ಡಾ.ಅಬ್ದುಲ್ ರಜಾಕ್
ಸರಕಾರ ಬಿಗಿಯಾದ ಲಾಕ್ ಡೌನ್ ಜಾರಿ ಮಾಡಿದ್ದರೂ ಕೂಡ ಮದ್ಯ ಮಾರಾಟಕ್ಕೆ ತುಸು ಸಡಿಲ ನೀತಿ ಅನುಸರಿಸಲಾಗುತ್ತಿದೆ.
ಹೌದು… ಸರ್ಕಾರಕ್ಕೆ ಭಾರಿ ಆದಾಯ ತಂದುಕೊಡುವ ಮದ್ಯದಂಗಡಿ ಮುಚ್ಚಿದರೆ ನಷ್ಟ ಅನುಭವಿಸಬೇಕಾಗುತ್ತದೆ ಎನ್ನುವ ಕಾರಣಕ್ಕೆ ಮನೆಯ ಬಾಗಿಲಿಗೆ ಮದ್ಯವನ್ನು ಪೂರೈಕೆ ಮಾಡಲು ಛತ್ತೀಸಗಢ ಸರ್ಕಾರ ಮುಂದಾಗಿದೆ.
ಈ ಬಗ್ಗೆ ಅಬಕಾರಿ ಸಚಿವ ಕವಾಸಿ ಲಖ್ಮಾ ಮಾಹಿತಿ ನೀಡಿದ್ದು, ಛತ್ತೀಸಗಢ ರಾಜ್ಯದಲ್ಲಿ ಮದ್ಯ ಹೋಂ ಡೆಲಿವರಿ ಪ್ರಾರಂಭ ಮಾಡಲಾಗುವುದು. ಲಾಕ್ ಡೌನ್ ನಿಂದ ಸರ್ಕಾರ ನಷ್ಟದಲ್ಲಿದೆ. ಈ ನಷ್ಟವನ್ನು ತುಂಬುವ ಕಾರಣಕ್ಕೆ ಈ ನಿರ್ಧಾರ ಕೈ ಗೊಳ್ಳಲಾಗಿದೆ. ಮದ್ಯ ಮಾರಾಟ ಸ್ಥಗಿತಗೊಂಡರೆ ಸರ್ಕಾರಕ್ಕೆ ಭಾರಿ ನಷ್ಟವಾಗುತ್ತದೆ ಹಾಗಾಗಿ ಈ ನಿರ್ಧಾರ ಎಂದು ತಿಳಿಸಿದ್ದಾರೆ.



