ವಿಜಯಸಾಕ್ಷಿ ಸುದ್ದಿ, ಬೀದರ
15 ಲಕ್ಷ ರೂ. ಲಂಚ ಪಡೆಯುವಾಗ ಬೀದರ್ ತಹಸೀಲ್ದಾರ ಗಂಗಾದೇವಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ನಗರದ ಚಿದ್ರಿ ಸರ್ವೇ ನಂಬರ್ 15ರ ಭೂಮಿ ಮುಟೆಷನ್ ಮಾಡಲು ಲಿಲಾಧರ ಎಂಬುವವರು ಕಂದಾಯ ಇಲಾಖೆಗೆ
ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಲೇವಾರಿಗೆ ತಹಸೀಲ್ದಾರ್ 20 ಲಕ್ಷ ರೂ.ಡಿಮ್ಯಾಂಡ್ ಮಾಡಿದ್ದರು. ಈ ಕುರಿತು ಲೀಲಾಧರ್ ಎಸಿಬಿಗೆ ದೂರು ನೀಡಿದ್ದರು.
ತಮ್ಮ ಮನೆಯಲ್ಲಿ 15 ಲಕ್ಷ ರೂ. ಲಂಚ ಪಡೆಯುವಾಗ ಎಸಿಬಿ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ತಹಸೀಲ್ದಾರ್ ಗಂಗಾದೇವಿ ಹಲವಾರು ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದರು. ಎಸಿಬಿ ಎಸ್ಪಿ ಸೇರಿದಂತೆ ಹಲವು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.