ವಿಜಯಸಾಕ್ಷಿ ಸುದ್ದಿ, ಗದಗ
ಬೆಟಗೇರಿಯ ರಾಮಮಂದಿರ ಬಳಿ ರಸ್ತೆ ಮೇಲೆ ಐಪಿಎಲ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಬಟ್ಟೆ ವ್ಯಾಪಾರಿಯನ್ನು ಗದಗ ಸೈಬರ್ ಕ್ರೈಮ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬೆಟಗೇರಿಯ ಬಟ್ಟೆ ವ್ಯಾಪಾರಿಯಾದ ಮಾಧು ತುಳಸಿನಾಥ ಮೆಹರವಾಡೆ ಬಂಧಿತ ಆರೋಪಿ.
ಆರ್ ಸಿಬಿ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ತಂಡಗಳ ನಡುವೆ ನಡೆದಿದ್ದ ಐಪಿಎಲ್ ಪಂದ್ಯಕ್ಕೆ ಮೊಬೈಲ್ ಆ್ಯಪ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ಪ್ರಮುಖ ಆರೋಪಿ, ಬುಕ್ಕಿ ಗಜೇಂದ್ರಗಡದ ಅರ್ಜುನ ಎಂಬಾತನ ಸೂಚನೆ ಮೇರೆಗೆ ಮಾಧು ಬೆಟ್ಟಿಂಗ್ ನಲ್ಲಿ ತೊಡಗಿದ್ದಾಗ ಪೊಲೀಸರು ಬಂಧಿಸಿದ್ದಾರೆ.
ಬಂಧಿತನಿಂದ 24 ಸಾವಿರದ 500 ನೂರು ರೂಪಾಯಿಗಳನ್ನು ಜಪ್ತಿ ಮಾಡಿದ್ದಾರೆ.