ಒತ್ತಡ ಸಹಿಸಲಾರದೆ ಪುರಸಭೆ ಉಪಾಧ್ಯಕ್ಷೆ ಖೈರುನಬಿ ರಾಜೀನಾಮೆ

0
Spread the love

ವಿಜಯಸಾಕ್ಷಿ ಸುದ್ದಿ, ನವಲಗುಂದ:

Advertisement

ಕಳೆದ  ಒಂದು ವಾರದಿಂದ ನಡೆಯುತ್ತಿದ್ದ ಸ್ಥಳೀಯ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷರ ರಾಜೀನಾಮೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಬಿಜೆಪಿ ಸದಸ್ಯರು ಉಪಾಧ್ಯಕ್ಷೆ ಖೈರುನಬಿ ನಾಶಿಪುಡಿ ಅವರಿಗೆ ರಾಜೀನಾಮೆ ಸಲ್ಲಿಸುವಂತೆ ಬಿಗಿಪಟ್ಟು ಹಿಡಿದಿದ್ದರು. ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಮಾತಿನ ಚಕಮಕಿಯು ನಡೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು.

ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಇದ್ದ ಕಾರಣ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುವ ಅವಶ್ಯಕತೆ ಇರಲಿಲ್ಲ. ಆದರೆ ಬಿಜೆಪಿ ಸದಸ್ಯರ ಒತ್ತಡಕ್ಕೆ ಮಣಿದು ಹಾಗೂ ರಂಜಾನ ತಿಂಗಳಲ್ಲಿ ಜಗಳ ಬೆಡವೆಂದು ತುಂಬಾ ನೊಂದುಕೊಂಡಿದ್ದ ಅವರು ಸೋಮವಾರ ಸಂಜೆ ಧಾರವಾಡ ಜಿಲ್ಲೆಯ ಉಪವಿಭಾಗಾಧಿಕಾರಿ ಅಶೋಕ ತೇಲಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. 


Spread the love

LEAVE A REPLY

Please enter your comment!
Please enter your name here