ವಿಜಯಸಾಕ್ಷಿ ಸುದ್ದಿ, ನವದೆಹಲಿ
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನವಿದೆ. ಆದರೆ, ಇಂತಹ ಸುದೀರ್ಘ ಇತಿಹಾಸ ಹೊಂದಿರುವ ಕನ್ನಡಕ್ಕೆ ಲೋಕಸಭಾ ಸಚಿವಾಲಯದಿಂದ ಅವಮಾನ ಉಂಟಾಗಿದೆ. ಇದರಿಂದಾಗಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸದ್ಯ ಲೋಕಸಭಾ ಸಚಿವಾಲಯದ ವ್ಯಾಪ್ತಿಯಲ್ಲಿ ಬರುವು ‘ಪಾರ್ಲಿಮೆಂಟರಿ ರಿಸರ್ಚ್ ಅಂಡ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಫಾರ್ ಡೆಮಾಕ್ರಸಿ ಸಂಸ್ಥೆಯು ಸಂಸತ್ತಿನ ಸದಸ್ಯರು, ರಾಜ್ಯ, ಕೇಂದ್ರಾಡಳಿತ ಪ್ರದೇಶದ ಶಾಸಕರು, ಅಧಿಕಾರಿಗಳಿಗೆ ಹಲವು ಭಾಷೆಗಳ ಕುರಿತು ಕಲಿಸಲು ಮುಂದಾಗಿದೆ.
ವಿದೇಶದ ಆರು ಭಾಷೆಗಳು ಹಾಗೂ ಭಾರತೀಯ ಆರು ಭಾಷೆಗಳನ್ನು ಕಲಿಸಲು ಮುಂದಾಗಿದೆ. ಇದರಲ್ಲಿ ಕನ್ನಡ ಕಡೆಗಣಿಸಿದ್ದು, ಅವಮಾನ ಮಾಡಿದಂತಾಗಿದೆ.
ಫ್ರೆಂಚ್, ಜರ್ಮನ್, ಜಪಾನೀಸ್, ಪೋರ್ಚುಗೀಸ್, ರಷ್ಯನ್ ಮತ್ತು ಸ್ಪ್ಯಾನಿಷ್ ಭಾಷೆಗಳು ಸೇರಿದಂತೆ ಭಾರತೀಯ 6 ಭಾಷೆಗಳಿಗೆ ಇಲ್ಲಿ ಕಲಿಕೆಗೆ ಅವಕಾಶ ನೀಡಲಾಗಿದೆ. ಭಾರತೀಯ ಭಾಷೆಗಳಾದ ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು ಹಾಗೂ ತೆಲುಗು ಭಾಷೆಗಳಿಗೆ ಮಾತ್ರ ಮನ್ನಣೆ ನೀಡಲಾಗಿದೆ.
ದಕ್ಷಿಣ ಭಾರತದ ತಮಿಳು ಹಾಗೂ ತೆಲುಗು ಭಾಷೆಗಳಿಗೆ ಮಾತ್ರ ಮಾನ್ಯತೆ ನೀಡಲಾಗಿದೆ. ಇದರಿಂದಾಗಿ ಇತಿಹಾಸ ಹೊಂದಿರುವ ಕನ್ನಡಕ್ಕೆ ಅವಮಾನ ಮಾಡಿದಂತಾಗಿದೆ. ಲೋಕಸಭೆಯಿಂದಲೇ ಈ ಅವಮಾನ ಆಗಿರುವುದರಿಂದಾಗಿ ಅಸಮಾಧಾನ ಉಂಟಾಗುತ್ತಿದೆ. ಈ ನಡೆಯ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.