ಕಪ್ಪತ್ತಗುಡ್ಡದ ಸೆರಗಿನಲ್ಲಿ ಭೂಕಂಪನ! ಬೆದರಿದ ಜನ!

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ, ವಿರೂಪಾಪುರ ತಾಂಡಾ ಸುತ್ತ ಮುತ್ತ ಮಂಗಳವಾರ ರಾತ್ರಿ ಲಘು ಭೂಕಂಪ ಉಂಟಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ವಿಜಯಸಾಕ್ಷಿಗೆ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ 8-24ರ ಸುಮಾರಿಗೆ 2-3 ಸೆಕೆಂಡ್‌ಗಳಷ್ಟು ಕಾಲ ಭೂಮಿ ಕಂಪಿಸಿದ ಅನುಭವ ತಾಂಡಾ ಹಾಗೂ ಕಲಕೇರಿ ಗ್ರಾಮದ ಜನರಿಗೆ ಉಂಟಾಗಿದ್ದು, ಮನೆಯ ಗೃಹಪಯೋಗಿ ವಸ್ತುಗಳು ಅಲುಗಾಡಿವೆ. ಘಟನೆಯಿಂದ ಗಾಬರಿಗೊಂಡ ಜನ ಮನೆಯಿಂದ ಹೊರ ಓಡಿ ಬಂದು ಗುಂಪು ಸೇರಿ ಚರ್ಚಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಈ ಕುರಿತು ವಿಜಯಸಾಕ್ಷಿಗೆ ಮಾಹಿತಿ ನೀಡಿರುವ ಕಲಕೇರಿ ಗ್ರಾಮ ಪಂಚಾಯತಿ ಸದಸ್ಯ ಜಹೀರುದ್ದೀನ್ ಮುಲ್ಲಾ ಅವರು, ಕಂಪನದ ಅನುಭವ ಬಿಚ್ಚಿಟ್ಟರು.


Spread the love

LEAVE A REPLY

Please enter your comment!
Please enter your name here