ಕಲಬುರಗಿಯಲ್ಲಿ ಮಹಾಮಾರಿಗೆ ಹೆಡ್ ಕಾನ್ಸಟೇಬಲ್ ಬಲಿ!

0
Spread the love

ವಿಜಯಸಾಕ್ಷಿ ಸುದ್ದಿ, ಕಲಬುರಗಿ

Advertisement

ಮಹಾಮಾರಿಗೆ ಜಿಲ್ಲೆಯಲ್ಲಿ ಹೆಡ್ ಕಾನ್ಸಟೇಬಲ್ ಬಲಿಯಾಗಿದ್ದಾರೆ.
ಇಲ್ಲಿಯ ಅಶೋಕ ನಗರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಎಚ್.ಸಿ. ಮಲ್ಲಿಕಾರ್ಜುನ ಬೆಳಗುಂಪಿ (45) ಬಲಿಯಾದ ಪೊಲೀಸ್.

ಇವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಸಂದರ್ಭದಲ್ಲಿ ಹೈ ಶುಗರ್, ಪಾರ್ಶ್ವವಾಯು ಬಾಧಿಸಿ ಸಾವನ್ನಪ್ಪಿದ್ದಾರೆ. ಆ ನಂತರ ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಈ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದ ಎರಡನೇ ಪೊಲೀಸ್ ಆಗಿದ್ದಾರೆ. ಈ ಹಿಂದೆ ಮಹಾಮಾರಿಗೆ ನಗರದ ರೋಜಾ ಎಂಬ ಎಎಸ್ ಐ ಸಾವನ್ನಪ್ಪಿದ್ದಾರೆ.
ಪೊಲೀಸರಲ್ಲಿಯೂ ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆತಂಕ ವ್ಯಕ್ತವಾಗುತ್ತಿದೆ.


Spread the love

LEAVE A REPLY

Please enter your comment!
Please enter your name here