HomeGadag Newsಕಾಂಗ್ರೆಸ್‌ನವರು ಕೆ.ಜೆ‌.ಜಾರ್ಜ್ ರನ್ನು ಬಂಧಿಸಿದ್ದರೆ?, ಕಾಂಗ್ರೆಸ್ಸಿಗರ ಆರೋಪ ಆಧಾರ ರಹಿತ; ಸಿಎಂ ಬೊಮ್ಮಾಯಿ

ಕಾಂಗ್ರೆಸ್‌ನವರು ಕೆ.ಜೆ‌.ಜಾರ್ಜ್ ರನ್ನು ಬಂಧಿಸಿದ್ದರೆ?, ಕಾಂಗ್ರೆಸ್ಸಿಗರ ಆರೋಪ ಆಧಾರ ರಹಿತ; ಸಿಎಂ ಬೊಮ್ಮಾಯಿ

For Dai;y Updates Join Our whatsapp Group

Spread the love

ಸಚಿವ ಕೆ.ಎಸ್.ಈಶ್ವರಪ್ಪ ಎರಡು ದಿನದ ಹಿಂದೆಯೇ ರಾಜೀನಾಮೆ ಕೊಡಲು ನಿರ್ಧರಿಸಿದ್ದರು

ವಿಜಯಸಾಕ್ಷಿ ಸುದ್ದಿ, ಗದಗ:

ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸುವುದು ಬಿಡುವುದು ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ತೀರ್ಮಾನಿಸುತ್ತಾರೆ ಎಂದು ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಹೇಳಿದರು.

ಗದಗ ಮತಕ್ಷೇತ್ರಕ್ಕೆ 1306.5 ಕೋಟಿ ರೂ. ಅನುದಾನ ನೀಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸುವುದಕ್ಕೂ ಮುನ್ನ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಅವರು ಮಾತನಾಡಿದರು.

ಈ ಹಿಂದೆ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ.ಜಾರ್ಜ್ ಅವರನ್ನು ಬಂಧಿಸಲಿಲ್ಲ. ಕರ್ನಾಟಕ ಪೊಲೀಸ್ ತನಿಖೆ ವೇಳೆಯೂ ಬಂಧಿಸಲಿಲ್ಲ, ಪ್ರಕರಣ ಸಿಬಿಐಗೆ ಹಸ್ತಾಂತರವಾಗಿ ತನಿಖೆ ಮಾಡಿದರೂ ಕೆ.ಜೆ.ಜಾರ್ಜ್ ಅವರನ್ನು ಬಂಧಿಸಲಿಲ್ಲ. ಅಂದು ತಮ್ಮ ಮಂತ್ರಿಗಳನ್ನೇ ಬಂಧಿಸದಿರುವ ಕಾಂಗ್ರೆಸ್‌ನವರಿಗೆ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸುವ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದರು.

ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಕರಣ ಹಿನ್ನೆಲೆಯಲ್ಲಿ ಕೆ.ಎಸ್.ಈಶ್ವರಪ್ಪ ರಾಜೀನಾಮೆ ಕೊಡಲು ನಿರ್ಧರಿಸಿದ್ದಾರೆ. ಹೀಗಾಗಿ ಪ್ರಕರಣದ ಸಂಪೂರ್ಣ ತನಿಖೆ ಆಗುವವರೆಗೂ ಸುಮ್ಮನಿದ್ದು, ಸಹಕರಿಸಬೇಕು. ತನಿಖೆಯಿಂದ ಸತ್ಯಾಂಶ ಹೊರ ಬರಲಿದೆ. ಅಲ್ಲದೆ, ಕಾಂಗ್ರೆಸ್ ನವರ ಆರೋಪ ಆಧಾರ ರಹಿತವಾಗಿದೆ ಎಂದು ಸ್ಪಷ್ಟಪಡಿಸಿದರು.

ಕೆ.ಎಸ್.ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ಎರಡು ದಿನನಗಳ ಹಿಂದೆಯೇ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದರು. ಆದರೆ, ನನ್ನಿಂದ ಪಕ್ಷಕ್ಕೆ ಇರಿಸುಮುರಿಸು ಆಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಟ್ಟಿರಲಿಲ್ಲ. ಈಗ ನೈತಿ ಹೊಣೆ ಹೊತ್ತು ರಾಜೀನಾಮೆ ಕೊಡಲು ನಿರ್ಧರಿಸಿದ್ದಾರೆ ಎಂದು ಹೇಳಿದರು.

ಕೆಡಿಪಿ ಸಭೆಯಲ್ಲಿ ಸಚಿವ ಬಿ.ಸಿ.ಪಾಟೀಲ ಹಾಗೂ ಶಾಸಕ ಕಳಕಪ್ಪ‌ ಬಂಡಿ ಮಾತಿನ ಚಕಮಕಿಯ ಕುರಿತು ಪ್ರತಿಕ್ರಿಯಿಸಿದ ಅವರು, ಜನರ ಒಳ್ಳೆಯದಕ್ಕೆ ಹಲವಾರು ಚರ್ಚೆಗಳು ಆಗುತ್ತವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ನೈಜ ಚರ್ಚೆ ಸಹಜ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಈ ಸಂದರ್ಭದಲ್ಲಿ ಸಚಿವರಾದ ಬಿ.ಸಿ.ಪಾಟೀಲ್, ಸಿ.ಸಿ.ಪಾಟೀಲ, ಶಾಸಕ ಕಳಕಪ್ಪ ಬಂಡಿ, ವಿಪ ಸದಸ್ಯ ಎಸ್.ವ್ಹಿ.ಸಂಕನೂರ, ಬಿಜೆಪಿ ಯುವ ಮುಖಂಡ ಅನಿಲ್ ಮೆಣಸಿನಕಾಯಿ, ನಗರಸಭೆ ಅಧ್ಯಕ್ಷೆ ಉಷಾ ದಾಸರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!