ವಿಜಯಸಾಕ್ಷಿ ಸುದ್ದಿ, ತುಮಕೂರು
ಕಾಂಗ್ರೆಸ್ ಗೆ ಪಕ್ಷದ ಅಧ್ಯಕ್ಷರೇ ಸುಪ್ರೀಂ ಎಂದು ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಅವರು, ಮುಂದಿನ ಸಿಎಂ ಸಿದ್ದರಾಮಯ್ಯ ಎಂಬುವುದು ಜಮೀರ್ ಅವರ ವೈಯಕ್ತಿಕ ಅಭಿಪ್ರಾಯ ಎಂದು ಸಿದ್ದರಾಮಯ್ಯನವರೇ ಹೇಳಿದ್ದಾರೆ. ನಮ್ಮೊಂದಿಗೆ ಕಾರ್ಯಕರ್ತರು ಇರುತ್ತಾರೆ. ಅವರಿಗೆ ಆಸೆಗಳು ಇರುತ್ತವೆ. ನಮ್ಮ ನಾಯಕರು ಹೀಗೆ ಇರಬೇಕು ಎಂಬುವುದು ಅವರ ಆಸೆಯಾಗಿರುತ್ತದೆ. ಹಾಗೆಯೇ ಸಿದ್ದರಾಮಯ್ಯರೊಂದಿಗೆ ಇರುವ ಜಮೀರ್ ಗೆ ಆ ರೀತಿಯ ಆಸೆ ಇರಬೇಕು ಎಂದು ಹೇಳಿದ್ದಾರೆ.
ಕೆಲವೊಮ್ಮೆ ನಾನು ಸಿಎಂ ಆಗಬೇಕು ಎಂಬುವುದು ನಮ್ಮ ಬೆಂಬಲಿಗರ ಆಸೆಯಾಗಿರುತ್ತದೆ. ಆದರೆ, ಈ ಬಾರಿ ಪ್ರತಿಯೊಬ್ಬರೂ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಅದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದ್ದಾರೆ.
ಬಿಜೆಪಿಯವರು ಕೆಟ್ಟ ಆಡಳಿತ ಕೊಟ್ಟಿದ್ದಾರೆ. ಹೀಗಾಗಿ ರಾಜ್ಯಕ್ಕೆ ಕಾಂಗ್ರೆಸ್ ಅವಶ್ಯವಾಗಿದೆ. ನಾವೆಲ್ಲರೂ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ನಮ್ಮಲ್ಲಿ ಪಕ್ಷದ ವ್ಯವಹಾರ ಬಂದಾಗ ಕಾಂಗ್ರೇಸ್ ನ ರಾಜ್ಯಾಧ್ಯಕ್ಷರೇ ಸುಪ್ರೀಂ. ಯಾರೇ ಅಧ್ಯಕ್ಷರಿದ್ದರೂ ಕಾಂಗ್ರೆಸ್ ಪಕ್ಷದ ಎಲ್ಲಾ ವ್ಯವಹಾರಗಳಿಗೆ ಅವರೇ ಸುಪ್ರೀಂ. ಡಿ.ಕೆ. ಶಿವಕುಮಾರ್ ಗೆ ಹೈ ಕಮಾಂಡ್ ಅಧಿಕಾರ ಕೊಟ್ಟಿದೆ. ಹೀಗಾಗಿ ಎಲ್ಲರೂ ಅವರು ಹೇಳಿದ ಹಾಗೆಯೇ ಕೇಳಬೇಕು ಎಂದು ಹೇಳಿದ್ದಾರೆ.
ನಮ್ಮಲ್ಲಿ ಬಣ ರಾಜಕಾರಣ ಇಲ್ಲ. ಜಮೀರ್ ಮೇಲೆ ಶಿಸ್ತು ಕ್ರಮಕೊಳ್ಳುವ ಹಂತಕ್ಕೆ ಯಾವ ಸಂದರ್ಭವೂ ಬಂದಿಲ್ಲ. ಅಂತಹ ಸಂದರ್ಭ ಬಂದರೆ, ಕಾಂಗ್ರೆಸ್ ಜನರಲ್ ಸೆಕ್ರೆಟರಿ ಸುರ್ಜೆವಾಲ ಅದನ್ನು ಸರಿಪಡಿಸುತ್ತಾರೆ ಎಂದು ಹೇಳಿದ್ದಾರೆ.