ವಿಜಯಸಾಕ್ಷಿ ಸುದ್ದಿ, ಗದಗ
ಕುಡಿತದ ಅಮಲಿನಲ್ಲಿ ಅಂಬ್ಯುಲೆನ್ಸ್ ಚಾಲನೆ ಮಾಡಿ ಕಾರಿಗೆ ಡಿಕ್ಕಿ ಹೊಡೆಸಿದ ಚಾಲಕನಿಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಗದಗ ನಗರದ ಮಲ್ಲಸಮುದ್ರ ಬಳಿ ನಡೆದಿದೆ.
ಘಟನೆಯಲ್ಲಿ ಕಾರು ಚಾಲಕ ಗೋವಿಂದಪ್ಪ ಲಮಾಣಿಗೆ ಗಂಭೀರ ಗಾಯವಾಗಿದೆ.
ಶಿರಹಟ್ಟಿ ಕಡೆಗೆ ಹೊರಟಿದ್ದ ಅಂಬ್ಯುಲೆನ್ಸ್ ಡಿಕ್ಕಿಯಾಗಿದೆ. ಪಾನಮತ್ತನಾಗಿ ಅಂಬ್ಯುಲೆನ್ಸ್ ಚಲಾಯಿಸುತ್ತಿದ್ದ ಚಾಲಕ ವಿಶ್ವನಾಥ್ ಬೋರಸೆಟ್ಟಿಯ ನಿರ್ಲಕ್ಷ್ಯ ಘಟನೆಗೆ ಕಾರಣವಾಗಿದೆ ಎಂದು ಆರೋಪಿಸಿದ ಸ್ಥಳೀಯರು, ಆತನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಇನ್ನೋರ್ವ ಸ್ನೇಹಿತನೂ ನಶೆಯಲ್ಲೇ ಅಂಬ್ಯುಲೆನ್ಸ್ ಓಡಿಸಿ, ಘಟನೆಗೆ ಕಾರಣನಾಗಿದ್ದಾನೆ.
ಘಟನೆ ಬಳಿಕ ಸ್ಥಳಕ್ಕೆ ಬಂದ ಹೈವೇ ಪೊಲೀಸರು ಅಂಬ್ಯುಲೆನ್ಸ್ ಚಾಲಕನನ್ನ ವಶಕ್ಕೆ ಪಡೆದು, ಗ್ರಾಮೀಣ ಠಾಣೆಗೆ ಕರೆದೊಯ್ದಿದ್ದಾರೆ. ಗಾಯಾಳು ಕಾರು ಚಾಲಕ ಗೋವಿಂದಪ್ಪ ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಅಂಬ್ಯುಲೆನ್ಸ್ ಶಿರಹಟ್ಟಿ ತಾಲೂಕು ಆಸ್ಪತ್ರೆಗೆ ಸೇರಿದ್ದು, ಚಾಲಕ ವಿಶ್ವನಾಥ್ ಶಿರಹಟ್ಟಿ ಪಟ್ಟಣದ ನಿವಾಸಿಯಾಗಿದ್ದಾನೆ. ಘಟನೆಗೆ ಕಾರಣನಾದ ಚಾಲಕನ ಮೇಲೆ ಸ್ಥಳೀಯರು ಕ್ರಮಕ್ಕೆ ಒತ್ತಾಯಿಸಿದ್ದಾರೆ.