ಕಾರು ಪಲ್ಟಿ; ಪಿಡಬ್ಲುಡಿ ಎಇಇ ದುರ್ಮರಣ

0
Spread the love

ವಿಜಯಸಾಕ್ಷಿ ಸುದ್ದಿ, ಕಾರವಾರ

Advertisement

ಅಂಕೋಲಾದಲ್ಲಿ ಕಾರು ಪಲ್ಟಿಯಾಗಿ ಪಿಡಬ್ಲುಡಿ ಎಇಇ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದೆ. ಸಿದ್ದಾಪುರದ ಲೋಕೊಪಯೋಗಿ ಇಲಾಖೆ ಎಇಇ ಮುದುಕಣ್ಣವರ್ ( 58 ) ಮೃತರು.
ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ನೇತೃತ್ವದಲ್ಲಿ ಕೋವಿಡ್ ಹಾಗೂ ನೆರೆಗೆ ಸಂಬಂಧಿಸಿದ ಸಭೆ ಆಯೋಜಿಸಲಾಗಿತ್ತು. ಸಭೆಗೆ ಶಿರಸಿ ಸಿದ್ದಾಪುರ ಮತ್ತು ಮುಂಡಗೋಡದ ಪಿಡಬ್ಲುಡಿ ಇಲಾಖೆಯ ಅಧಿಕಾರಿಗಳು ಸೇರಿಕೊಂಡು ಬರುತ್ತಿದ್ದರು.

ಈ ವೇಳೆ ಅಂಕೋಲಾ ಸಮೀಪದ ಬಾಳೆಗುಳಿ ಕ್ರಾಸ್ ನಲ್ಲಿ ಕಾರು ಪಲ್ಟಿಯಾಗಿ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಇತರ ಅಧಿಕಾರಿಗಳು ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರವಾರಕ್ಕೆ ಸಭೆಗೆ ತೆರಳುತ್ತಿದ್ದ ಸಚಿವರು ಈ ಘಟನೆ ಬಗ್ಗೆ ಮಾಹಿತಿ ಪಡೆದು ತಕ್ಷಣ ಅಂಕೋಲಾ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡ ಅಧಿಕಾರಿಗಳನ್ನು ತುರ್ತಾಗಿ ಮಂಗಳೂರಿಗೆ ಸಾಗಿಸುವುದಕ್ಕೆ ಖುದ್ದು ತಾವೇ ಮುಂದೆ ನಿಂತು ವ್ಯವಸ್ಥೆ ಮಾಡಿದರು.

ಅಪಘಾತದಲ್ಲಿ ಮೃತರಾದ ಸಿದ್ದಾಪುರ ತಾಲೂಕಿನ ಲೋಕೋಪಯೋಗಿ ಎ.ಇ.ಇ ಮುದುಕಣ್ಣನವರ ಅವರ ಪಾರ್ಥಿವ ಶರೀರಕ್ಕೆ ಸಚಿವರು ಅಂತಿಮ ನಮನ ಸಲ್ಲಿಸಿದರು.


Spread the love

LEAVE A REPLY

Please enter your comment!
Please enter your name here