ಕುಟುಂಬ ಕಲಹ; ಮೂರು ತಿಂಗಳ ಕಂದಮ್ಮ, ಪತ್ನಿ‌ ಕೊಲೆಗೈದು ನೇಣಿಗೆ ಶರಣಾದ ಪತಿ?

0
Spread the love

ವಿಜಯಸಾಕ್ಷಿ ಸುದ್ದಿ, ಗದಗ:

Advertisement

ಮೂರು ತಿಂಗಳ ಹೆಣ್ಣು ಮಗು ಹಾಗೂ ಪತ್ನಿ ಕೊಲೆಗೈದು ಪತಿ ಮಹಾಶಯನೊಬ್ಬ ನೇಣಿಗೆ ಶರಣಾದ ಮನ ಕಲುಕುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡ ಗ್ರಾಮದ ತೋಟದ ಮನೆಯಲ್ಲಿ ಈ ದುರ್ಘಟನೆ ನಡೆದಿದೆ.

ಮೂರು ತಿಂಗಳದ ಕಂದಮ್ಮ ರೂಪಶ್ರೀ, ಪತ್ನಿ ಸುಧಾ, ಪತಿ ಮಲ್ಲಪ್ಪ ಗಡಾದ ಮೃತಪಟ್ಟವರು.

ನಾಗೇಂದ್ರಗಡ ಗ್ರಾಮದ ಹೊರವಲಯದಲ್ಲಿರುವ ಜಮೀನನಲ್ಲಿ ಇರುವ ಮನೆಯಲ್ಲಿ ವಾಸವಾಗಿದ್ದರು.

ಮೃತ ಮಲ್ಲಪ್ಪ ಗಡಾದ ಮನೆಯ ಹಾಲ್ ನಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಮಲ್ಲಪ್ಪನ ಪತ್ನಿ ಸುಧಾ ಹಾಗೂ ಮಗಳು ರೂಪಶ್ರೀ ಮತ್ತೊಂದು ರೂಮಿನಲ್ಲಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಘಟನಾ ಸ್ಥಳಕ್ಕೆ ರೋಣ ಸಿಪಿಐ ಸುಧೀರಕುಮಾರ್ ಬೆಂಕಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ‌ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಈ ಘಟನೆಗೆ ಕುಟುಂಬ ಕಲಹ ಕಾರಣವಿರಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗಜೇಂದ್ರಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here