ಕೇಂದ್ರ ಸಚಿವ ಸಂಪುಟ ವಿಸ್ತರಣೆ ಮಾಧ್ಯಮ ಸೃಷ್ಟಿ ಜೋಶಿ

0
Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ

Advertisement

ಕೇಂದ್ರದ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂಬ ವಿಚಾರವನ್ನು ಮಾಧ್ಯಮಗಳು ಸೃಷ್ಟಿ ಮಾಡಿವೆ. ಆ ಬಗ್ಗೆ ಪ್ರಧಾನಿಗಳು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಯಾರನ್ನು ಬಿಡಬೇಕು ಎನ್ನುವ ವಿಚಾರ ತಿಳಿಯುವುದಿಲ್ಲ, ಇದರ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ ಎಂದರು.

ಸಿ.ಪಿ.ಯೋಗೀಶ್ವರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯೋಗೀಶ್ವರ ಅವರು ಯಾವ ಯುನಿವರ್ಸಿಟಿಯಲ್ಲಿ ಪರೀಕ್ಷೆ ಬರೆದಿದ್ದಾರೋ ಗೊತ್ತಿಲ್ಲ. ರಾಜ್ಯ ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ಮುಗಿದಿದೆ. ಎಲ್ಲವೂ ಸರಿ ಹೋಗಿದೆ. ದೆಹಲಿಗ ಹೋಗೋದು, ಸುತ್ತೂರು ಮಠಕ್ಕೆ ಹೋಗೋದು ರಾಜ್ಯ ರಾಜಕೀಯದಲ್ಲಿ ಬದಲಾವಣೆ ಎಂದು ಮಾಧ್ಯಮಗಳು ಸೃಷ್ಟಿ ಮಾಡಿದರೆ ಏನು ಮಾಡೋದು? ಎಂದು ಜೋಶಿ ತಿಳಿಸಿದರು.


Spread the love

LEAVE A REPLY

Please enter your comment!
Please enter your name here