ವಿಜಯಸಾಕ್ಷಿ ಸುದ್ದಿ, ಮಂಡ್ಯ
Advertisement
ಇತ್ತೀಚೆಗಷ್ಟೇ ಕೊರೊನಾ ಸೋಂಕು ಹೆಚ್ಚಾಗಿದ್ದ ಕಾರಣ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿತ್ತು. ಆದರೆ, ಇಂದು ಸೀಲ್ ಡೌನ್ ತೆರವುಗೊಳಿಸಲಾಗಿದೆ. ಇದನ್ನು ತೆರುವುಗೊಳಿಸುತ್ತಿದ್ದಂತೆ, ಇಲ್ಲಿಯ ಜನ ಕೊರೊನಾವನ್ನೇ ಮರೆತಂತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮಾಸ್ಕ್ ಧರಿಸದೆ ಓಡಾಡುತ್ತಿದ್ದಾರೆ. ಅಲ್ಲದೇ, ಅಂಗಡಿ- ಮುಂಗಟ್ಟು ತೆರೆದು ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ.
ಇದರಿಂದಾಗಿ ಮತ್ತೆ ಕೊಪ್ಪದಲ್ಲಿ ಕೊರೊನಾ ಸೋಂಕು ಹರಡುವ ಆತಂಕ ಮನೆ ಮಾಡಿದೆ. ಕೊಪ್ಪದಲ್ಲಿಯೇ ಪೊಲೀಸ್ ಠಾಣೆ ಇದ್ದರೂ ಪೊಲೀಸರು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಪರಿಸ್ಥಿತಿ ಎದುರಿಸಿದರೂ ಜನ ಮಾತ್ರ ಕೊರೊನಾ ಮರೆತು ಮೈಮರೆತು ಓಡಾಡುತ್ತಿರುವುದು ಹಲವು ಆತಂಕಕ್ಕೆ ಕಾರಣವಾಗುತ್ತಿದೆ.