ವಿಜಯಸಾಕ್ಷಿ ಸುದ್ದಿ, ಗದಗ
ಗದಗ ಜಿಲ್ಲೆಯಲ್ಲಿ ಸೋಂಕು ತನ್ನ ಅಟಾಟೋಪ ಮುಂದುವರೆಸಿದೆ. ಹಳ್ಳಿ ಹಳ್ಳಿಗೂ ಸೋಂಕು ವ್ಯಾಪಿಸಿದ್ದರಿಂದ ಗ್ರಾಮೀಣ ಭಾಗದಲ್ಲಿ ಜನ ಆತಂಕದಿಂದ ಕಾಲ ಕಳೆಯುವಂತೆ ಆಗಿದೆ. ಇವತ್ತು ಸೋಂಕು ಸ್ಫೋಟವಾಗಿದ್ದು, ಐದು ನೂರರ ಗಡಿ ದಾಟಿದೆ.
ಇವತ್ತಿನ ಜಿಲ್ಲಾಡಳಿತದ ವರದಿಯಂತೆ ಐದು ಜನ ಸೋಂಕಿಗೆ ಬಲಿಯಾಗಿದ್ದಾರೆ.
ಇಂದಿನ 543 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 18830 ಕ್ಕೆ ಏರಿಕೆ ಕಂಡಿದೆ.
ಗದಗ ನಗರ ಹಾಗೂ ತಾಲೂಕಿನಲ್ಲಿ -237, ಮುಂಡರಗಿ-50, ನರಗುಂದ-50 ರೋಣ-108, ಶಿರಹಟ್ಟಿ-88, ಹೊರಜಿಲ್ಲೆಯ-10 ಸೇರಿದಂತೆ 543 ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಂತೆ ಐವರು ಮೃತಪಟ್ಟಿದ್ದು, ಮೃತರ ಸಂಖ್ಯೆ 192 ಕ್ಕೇರಿದೆ.
ಬೆಳಗಾವಿ ಜಿಲ್ಲೆಯ ನಿವಾಸಿ 57 ವರ್ಷದ ವ್ಯಕ್ತಿ ಮೇ -11 ರಂದು ಜಿಮ್ಸ್ ಗೆ ದಾಖಲಾಗಿದ್ದರು. ಕೋವಿಡ್ ನಿಂದಾಗಿ ಮೇ 13 ರಂದು ಮೃತಪಟ್ಟಿದ್ದಾರೆ.
ರೋಣ ತಾಲೂಕಿನ ನರೇಗಲ್ ನಿವಾಸಿ 70 ವರ್ಷದ ಮಹಿಳೆ ಮೇ -09 ರಂದು ಜಿಮ್ಸ್ ಗೆ ದಾಖಲಾಗಿದ್ದು, ಕೋವಿಡ್ ದೃಢಪಟ್ಟಿತ್ತು, ಮೇ 16 ರಂದು ಜಿಮ್ಸ್ ನಲ್ಲಿ ಮೃತಪಟ್ಟಿದ್ದಾರೆ.
ಗದಗ ತಾಲೂಕಿನ ಮುಳಗುಂದ ನಿವಾಸಿ 45 ವರ್ಷದ ಮಹಿಳೆ ಮೇ 10 ರಂದು ಜಿಮ್ಸ್ ಗೆ ದಾಖಲಾಗಿದ್ದರು. ಮೇ 16 ರಂದು ಮೃತಪಟ್ಟಿದ್ದಾರೆ.
ಗಜೇಂದ್ರಗಡ ನಿವಾಸಿ 68 ವರ್ಷದ ಮಹಿಳೆ ಮೇ 12 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಮೇ 16 ರಂದು ಮೃತಪಟ್ಟಿದ್ದಾರೆ.
ರೋಣ ತಾಲೂಕಿನ ಹೊಳೆ ಆಲೂರ ನಿವಾಸಿ 76 ವರ್ಷದ ವ್ಯಕ್ತಿ, ರೋಣ ತಾಲೂಕು ಆಸ್ಪತ್ರೆಗೆ ಮೇ-10 ರಂದು ದಾಖಲಾಗಿದ್ದರು. ಇವರು ಮೇ -17 ರಂದು ಮೃತಪಟ್ಟಿದ್ದಾರೆ
ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇವರೆಲ್ಲರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು 243 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 15631 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.
ಇಂದು ಜಿಲ್ಲೆಯಲ್ಲಿ 3007 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ 180 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.