ವಿಜಯಸಾಕ್ಷಿ ಸುದ್ದಿ, ಗದಗ
ಗದಗ ಜಿಲ್ಲೆಯ ಜನರಿಗೆ ಸತತ ಮೂರನೇ ದಿನವೂ ಶುಭ ಸುದ್ದಿ ಸಿಕ್ಕಿದೆ. ಹೌದು ಶುಕ್ರವಾರದಿಂದ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಇಳಿಮುಖದತ್ತ ಸಾಗಿದೆ. ಇದರಿಂದಾಗಿ ಜಿಲ್ಲೆಯ ಜನರಲ್ಲಿ ಇದ್ದ ಆತಂಕ ದೂರಾಗಿದ್ದು, ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
ಇಂದು 133 ಜನರಿಗೆ ಸೋಂಕು ತಗುಲಿದೆ. ಇಂದು ಜಿಲ್ಲಾಡಳಿತದ ಮಾಹಿತಿ ಪ್ರಕಾರ ನಾಲ್ವರು ಮೃತಪಟ್ಟಿದ್ದಾರೆ.
ಇಂದಿನ 133 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 24793 ಕ್ಕೆ ಏರಿಕೆ ಕಂಡಿದೆ.
ಗದಗ ನಗರ ಹಾಗೂ ತಾಲೂಕಿನಲ್ಲಿ -60, ಮುಂಡರಗಿ-12, ನರಗುಂದ-12, ರೋಣ-25, ಶಿರಹಟ್ಟಿ-22, ಹೊರಜಿಲ್ಲೆಯ-02 ಸೇರಿದಂತೆ 133 ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಂತೆ ನಾಲ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 273 ಕ್ಕೇರಿದೆ.
ಗದಗ ಶಹರದ ನಂದಿಶ್ವರ ನಗರದ ನಿವಾಸಿ 62 ವರ್ಷದ ವ್ಯಕ್ತಿ ಜೂನ್- 04 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ನಿಂದಾಗಿ ಜೂನ -06 ರಂದು ಮೃತಪಟ್ಟಿದ್ದಾರೆ.
ನರಗುಂದ ತಾಲೂಕಿನ ಶಿರೋಳ ನಿವಾಸಿ 75 ವರ್ಷದ ವ್ಯಕ್ತಿ ಜೂನ್-03 ರಂದು ನರಗುಂದ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ದೃಢಪಟ್ಟಿತ್ತು, ಜೂನ್ 03 ರಂದೇ ಮೃತಪಟ್ಟಿದ್ದಾರೆ.
ಶಿರಹಟ್ಟಿ ತಾಲೂಕಿನ ಯತ್ತಿನಹಳ್ಳಿ ನಿವಾಸಿ 72 ವರ್ಷದ ವ್ಯಕ್ತಿ ಮೇ-29 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಜೂನ್ -04 ರಂದು ಮೃತಪಟ್ಟಿದ್ದಾರೆ.
ಗದಗ ತಾಲೂಕಿನ ಹುಲಕೋಟಿ ನಿವಾಸಿ 56 ವರ್ಷದ ವ್ಯಕ್ತಿ ಜೂನ್ -04 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್- 05 ರಂದು ಮೃತಪಟ್ಟಿದ್ದಾರೆ.
ಇವರೆಲ್ಲರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು 316 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 22805 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.
ಇಂದು ಜಿಲ್ಲೆಯಲ್ಲಿ 1715 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ 155 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.