ಕೊರೊನಾ ಚಿಕಿತ್ಸೆಗೆಂದು ಬಂದವ ರಕ್ತ ಕಾರಿ ಸತ್ತ!

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ಕೊರೊನಾ ಚಿಕಿತ್ಸೆಗೆಂದು ದಾಖಲಾದ ವ್ಯಕ್ತಿಯೊಬ್ಬರು ಹೃದಯ ಸಂಬಂಧಿ ಸಮಸ್ಯೆಯಿಂದ ರಕ್ತಕಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ. 26 ವರ್ಷದ ವ್ಯಕ್ತಿಯೊಬ್ಬರು ಆರ್‌ ಟಿ ನಗರದ ಅಂಬೇಡ್ಕರ್ ಆಸ್ಪತ್ರೆಗೆ ಕೊರೊನಾ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾಗಿ 20 ದಿನ ಕಳೆದರೂ ಚೇತರಿಕೆ ಕಂಡಿರಲಿಲ್ಲ. ಅವರಲ್ಲಿ ಎದೆ ನೋವು ಶುರುವಾಗಿ ವೈದ್ಯರ ಸಲಹೆ ಮೇರೆಗೆ ಜಯದೇವ ಆಸ್ಪತ್ರೆಗೆ ಶಿಫ್ಟ್ ಆಗಿದ್ದರು.

ಜಯದೇವ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿತ ಚಿಕಿತ್ಸೆ ನಡೆಯುತ್ತಿತ್ತು. ಆದರೆ, ಏಕಾಏಕಿ ರಕ್ತಕಾರಿ ಸಾವನ್ನಪ್ಪಿದ್ದಾರೆ.
ಈ ವ್ಯಕ್ತಿ ಗಾರೆ ಕೆಲಸ ಮಾಡುತ್ತಿದ್ದರು. ಸಾವನ್ನಪ್ಪಿರುವ ವ್ಯಕ್ತಿಗೆ 7 ವರ್ಷದ ಮಗನಿದ್ದಾನೆ. ಇವರ ಪತ್ನಿ ಗರ್ಭಿಣಿಯಾಗಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಬನಶಂಕರಿಯ ಚಿತಾಗಾರದಲ್ಲಿ ನಡೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.


Spread the love

LEAVE A REPLY

Please enter your comment!
Please enter your name here