ವಿಜಯಸಾಕ್ಷಿ ಸುದ್ದಿ, ಗದಗ
ಶನಿವಾರ 28 ಜನರಿಗೆ ಸೋಂಕು ತಗುಲಿದೆ. ಇಂದು ಕೂಡ ಕೋವಿಡ್ ನಿಂದಾಗಿ ಒಬ್ಬರು ಮೃತಪಟ್ಟ ಬಗ್ಗೆ ಜಿಲ್ಲಾಡಳಿತ ಹಾಗೂ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಬಂದಿದೆ. ಇದರಿಂದಾಗಿ ಇದುವರೆಗೂ ಕೋವಿಡ್ ನಿಂದಾಗಿ 292 ಜನ ಮೃತಪಟ್ಟಂತಾಗಿದೆ.
ಜಿಲ್ಲೆಯ ಲಕ್ಷ್ಮೇಶ್ವರ ನಿವಾಸಿ 85 ವರ್ಷದ ಮಹಿಳೆ ಜೂನ್ 10 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೆ ಜೂನ್ 19 ರಂದು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದು, ಮೃತರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಪ್ರಕಟಣೆ ನೀಡಿದ್ದಾರೆ.
ಇಂದು 28 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 25583 ಏರಿಕೆ ಕಂಡಿದೆ.
ಗದಗ ನಗರ ಹಾಗೂ ತಾಲೂಕಿನಲ್ಲಿ -15, ಮುಂಡರಗಿ-02, ನರಗುಂದ-02, ರೋಣ-05, ಶಿರಹಟ್ಟಿ-04, ಹೊರಜಿಲ್ಲೆಯ-00 ಸೇರಿದಂತೆ 28 ಪ್ರಕರಣಗಳು ದೃಢಪಟ್ಟಿವೆ.
ಇಂದು 85 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 24901 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.
ಇಂದು ಜಿಲ್ಲೆಯಲ್ಲಿ 390 ಜನ ಸೋಂಕಿತರು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ 82 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.