ವಿಜಯಸಾಕ್ಷಿ ಸುದ್ದಿ, ಗದಗ
Advertisement
ಜಿಲ್ಲೆಯ ಉಸ್ತುವಾರಿ ಸಚಿವರು ಕೋವಿಡ್ ನಿಯಂತ್ರಣ ಮಾಡುವಲ್ಲಿ ವಿಫಲರಾಗಿದ್ದಾರೆ ಎಂದು ಅಡವಿ ಸೋಮಾಪೂರ ಗ್ರಾಮ ಪಂಚಾಯತಿ ಮಾಜಿ ಸದಸ್ಯ ರಾಜು ಪೆಂಢಾರ್ ಆರೋಪಿಸಿದ್ದಾರೆ.
ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಗಳು ಹೆಚ್ಚುತ್ತ ಸಾಗುತ್ತಿವೆ. ಆದರೆ, ಈ ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಅವರು ವಿಫಲರಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು ಅವರ ಕ್ಷೇತ್ರದಲ್ಲಿ ಒಂದೇ ಒಂದು ಕೋವಿಡ ಸೆಂಟರ್ ನ್ನು ಕೂಡ ತೆರದಿಲ್ಲ. ಆದರೆ, ವಿರೋಧ ಪಕ್ಷದ ನಾಲ್ಕು ಮತ ಕ್ಷೇತ್ರದ ನಾಯಕರು, ಸಾರ್ವಜನಿಕರ ಸಹಾಯಕ್ಕಾಗಿ ಪಕ್ಷ ಬೇಧ ಮರೆತು ಕೋವಿಡ್ ಕೇರ್ ಸೆಂಟರ್ ತೆರೆದಿದ್ದಾರೆ. ಈ ಮೂಲಕ ಜನರ ಸೇವೆ ಮಾಡುತ್ತ, ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಪೆಂಡಾರ್ ಹೇಳಿದ್ದಾರೆ.

