ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಕನ್ನಡ ರಿಯಾಲಿಟಿ ಶೋ ಬಿಗ್ ಬಾಸ್ ಸದ್ಯ ಅಂತ್ಯ ಕಂಡಿದೆ. ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ವಾಹಿನಿಯು ಬಿಗ್ ಬಾಸ್ ನ್ನು ಅರ್ಧಕ್ಕೆ ನಿಲ್ಲಿಸಿದೆ. ಸದ್ಯ ಮನೆಯಿಂದ ಅರ್ಧಕ್ಕೆ ಹೊರ ಬಂದಿರುವ ಸ್ಪರ್ಧಿಗಳು ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸಲು ಮುಂದಾಗಿದ್ದಾರೆ.
ಬಿಗ್ ಬಾಸ್ ಮನೆ ಭಾನುವಾರದಂದು ಬಾಗಿಲು ಹಾಕಿಕೊಂಡಿದೆ. ಅದರ ಕೊನೆಯ ಸಂಚಿಕೆ ಇಂದು ಪ್ರಸಾರವಾಗಲಿದೆ. ಬಿಗ್ ಬಾಸ್ ಕೊನೆಯಾಗುವ ವಿಷಯ ತಿಳಿದುಕೊಂಡಿರುವ ಸ್ಪರ್ಧಿಗಳು, ಹೊರಗಡೆ ಕೊರೊನಾದಿಂದ ಜನ ಅನುಭವಿಸುತ್ತಿರುವ ಸಂಕಷ್ಟದ ಬಗ್ಗೆಯೂ ತಿಳಿದುಕೊಂಡಿದ್ದಾರೆ. ನಂತರ ಪ್ರತಿದಿನ ಸುರಕ್ಷಿತವಾಗಿ ನೋಡಿಕೊಂಡಿದ್ದಕ್ಕೆ ಬಿಗ್ ಬಾಸ್ ಗೆ ಧನ್ಯವಾದ ತಿಳಿಸಿದ್ದಾರೆ.
ಅಲ್ಲದೇ, ಮನೆಯಿಂದ ಹೊರ ಹೋದ ನಂತರ ಕೊರೊನಾ ವಾರಿಯರ್ಸ್ ಆಗಿ ತಮ್ಮ ಕೈಲಾದ ಸಹಾಯ ಮಾಡುತ್ತೇವೆ ಎಂದು ಸ್ಪರ್ಧಿಗಳು ಹೇಳಿದ್ದಾರೆ. ಇದರೊಂದಿಗೆ ಪ್ರತಿಯೊಬ್ಬರೂ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತೇವೆ ಎಂದು ಹೇಳಿದ್ದಾರೆ. ಭಾರವಾದ ಹೃದಯದಿಂದಲೇ ಸ್ಪರ್ಧಿಗಳು ಮನೆಯಿಂದ ಹೊರ ನಡೆದಿದ್ದಾರೆ.