ಕೊರೊನಾ: ಶುಭಸುದ್ದಿ ನೀಡಿದ ಭಾನುವಾರ, ಗುಣಮುಖರ ಸಂಖ್ಯೆ ಏರಿಕೆ, ಸೋಂಕಿತರ ಸಂಖ್ಯೆ ಇಳಿಕೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಗದಗ ಜಿಲ್ಲೆಯಲ್ಲಿ ಸೋಂಕು ನಿನ್ನೆಯಿಂದ ಇಳಿಮುಖವಾಗುತ್ತಿದೆ. ನಿನ್ನೆ ನಾಲ್ಕು ನೂರರ ಗಡಿ ದಾಟಿದ್ದ ಸೋಂಕಿನ ಸಂಖ್ಯೆಯಲ್ಲಿ ಇಂದು ಮೂನ್ನೂರರ ಗಡಿ ದಾಟಿದೆ. ಸೋಂಕಿತರಕ್ಕಿಂತ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರೇ ಹೆಚ್ಚು.

ಇಂದಿನ 371 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 21129 ಕ್ಕೆ ಏರಿಕೆ ಕಂಡಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -188, ಮುಂಡರಗಿ-23, ನರಗುಂದ-10, ರೋಣ-73, ಶಿರಹಟ್ಟಿ-65, ಹೊರಜಿಲ್ಲೆಯ-12 ಸೇರಿದಂತೆ 371 ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಂತೆ ನಾಲ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 215 ಕ್ಕೇರಿದೆ.

ಗದಗ ಶಹರದ ‌ನಿವಾಸಿ
60 ವರ್ಷದ ವ್ಯಕ್ತಿ ಮೇ-11 ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ನಿಂದಾಗಿ ಮೇ 19 ರಂದು ಮೃತಪಟ್ಟಿದ್ದಾರೆ.

ಕೊಪ್ಪಳ ಜಿಲ್ಲೆಯ ಬೊಚನಹಳ್ಳಿ ನಿವಾಸಿ 65 ವರ್ಷದ ವ್ಯಕ್ತಿ ಮೇ -11 ಮುಂಡರಗಿ ‌ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ದೃಢಪಟ್ಟಿತ್ತು, ಮೇ 19 ರಂದು ಮೃತಪಟ್ಟಿದ್ದಾರೆ.

ಗದಗ ತಾಲೂಕಿನ ಮುಳಗುಂದ ನಿವಾಸಿ ,60 ವರ್ಷದ ವ್ಯಕ್ತಿ ಮೇ 19 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಮೇ 20 ರಂದು ಮೃತಪಟ್ಟಿದ್ದಾರೆ.

ರೋಣ ತಾಲೂಕಿನ ಸೂಡಿ ನಿವಾಸಿ 74 ವರ್ಷದ ವ್ಯಕ್ತಿ ಮೇ 19 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮೇ 22 ರಂದು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇವರೆಲ್ಲರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಕೂಡ ದಾಖಲೆಯ 421 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 17511 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 3403 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 192 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.


Spread the love

LEAVE A REPLY

Please enter your comment!
Please enter your name here