ಕೊರೊನಾ ಸಂಕಷ್ಟ; ನಟಿ ಸನ್ನಿಲಿಯೋನನಿಂದ ಮಾನವೀಯ ಕಾರ್ಯ

0
Spread the love

ವಿಜಯಸಾಕ್ಷಿ ಸುದ್ದಿ, ನವದೆಹಲಿ

Advertisement

ಸದ್ಯ ಮಹಾಮಾರಿಯ ಅಟ್ಟಹಾಸಕ್ಕೆ ಇಡೀ ಭಾರತವೇ ಸಿಲುಕಿದೆ. ಈಗಾಗಲೇ ಹಲವೆಡೆ ಲಾಕ್ ಡೌನ್ ಕೂಡ ಘೋಷಣೆಯಾಗಿದೆ. ಹೀಗಾಗಿ ಸಾವಿರಾರು ವಲಸೆ ಕಾರ್ಮಿಕರು ತುತ್ತು ಅನ್ನಕ್ಕಾಗಿ ಪರದಾಡುತ್ತಿದ್ದಾರೆ. ಇಂತಹ ಜನರಿಗೆ ಹಲವರು ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ಇವರ ಸಾಲಿಗೆ ಸದ್ಯ ನಟಿ ಸನ್ನಿಲಿಯೋನ್ ನಿಂತಿದ್ದಾರೆ.

ನಟಿ ಸನ್ನಿ ಲಿಯೋನ್ ಸದಾ ಜನರ ಕಷ್ಟಕ್ಕೆ ಸ್ಪಂದಿಸುವ ಮನಸ್ಥಿತಿ ಹೊಂದಿದ ಸಹೃದಯಿ. ಸದ್ಯ ಕಷ್ಟಕ್ಕೆ ಸಿಲುಕಿದವರ ಹೊಟ್ಟೆ ತುಂಬಿಸುತ್ತ ಮಾನವೀಯ ಕಾರ್ಯ ಮಾಡುತ್ತಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಹಸಿದಿರುವ ಸುಮಾರು 10 ಸಾವಿರ ಜನರಿಗೆ ಅನ್ನ ನೀಡುವ ಮಹಾನ್ ಕಾರ್ಯವನ್ನು ಅವರು ಮಾಡುತ್ತಿದ್ದಾರೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸನ್ನಿ, ದೇಶದಲ್ಲಿ ನಾವು ಬಿಕ್ಕಟ್ಟು ಎದುರಿಸುತ್ತಿದ್ದೇವೆ. ಸಹಾನುಭೂತಿ ಮತ್ತು ಒಗ್ಗಟ್ಟಿನೊಂದಿಗೆ ನಾವು ಮುಂದೆ ಬರುತ್ತೇವೆ. ಈ ಸಮಯದಲ್ಲಿ ಅಗತ್ಯವಿರುವ ಸಾವಿರಾರು ಜನರಿಗೆ ಪ್ರೋಟೀನ್ ತುಂಬಿದ ಸಸ್ಯಾಹಾರಿ ಆಹಾರ ನೀಡಲು ಮುಂದಾಗಿರುವುದಾಗಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here